/newsfirstlive-kannada/media/post_attachments/wp-content/uploads/2024/04/whatsapp-3.jpg)
ಮೆಟಾ ಒಡೆತನದ ವಾಟ್ಸಪ್​ ತನ್ನ ಬಳಕೆದಾರರಿಗೆ ಎಂಡ್​-ಟು-ಎಂಡ್​​ ಎನ್​ಕ್ರಿಪ್ಟ್​​ ಸೇವೆಯನ್ನ ಒದಗಿಸುತ್ತಿದೆ. ಈ ಮೂಲಕ ಬಳಕೆದಾರರನ್ನು ಸುರಕ್ಷಿತವಾಗಿರಿಸಿದೆ. ಆದರೆ ಮುಂದಿನ ದಿನಗಳಲ್ಲಿ ಚಾಟ್​​ ಎನ್​ಕ್ರಿಪ್ಟ್​ ಅನ್ನು ಭೇದಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲಿದೆ. ಈ ಮುನ್ನವೇ ಎಚ್ಚೆತ್ತ ವಾಟ್ಸಪ್ ಹೀಗಾದರೆ ನಾವು ಭಾರತದಿಂದ ನಿರ್ಗಮಿಸುತ್ತೇವೆ ಎಂದು ವಾಟ್ಸಪ್ ಎಚ್ಚರಿಕೆ ನೀಡಿದೆ.
ಕಳೆದ ಒಂದು ವರ್ಷದಿಂದ ಭಾರತ ಸರ್ಕಾರ ಮತ್ತು ವಾಟ್ಸಪ್​ ಮಧ್ಯೆ ಗೌಪ್ಯತೆ ವಿಚಾರವಾಗಿ ಹೋರಾಟ ನಡೆಯುತ್ತಲೇ ಇದೆ. ಅದರಲ್ಲೂ ಚಾಟ್​​, ಕರೆ, ವಿಡಿಯೋ ಕರೆಗಳನ್ನು ಸುರಕ್ಷಿತವಾಗಿರಿಸಲು ವಾಟ್ಸಪ್ ಹೋರಾಡುತ್ತಲೇ ಬಂದಿದೆ. ಆದರೆ ಸರ್ಕಾರ ಸಂದೇಶದ ಮೂಲವನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ದೆಹಲಿ ಕೋರ್ಟ್​ ಮೊರೆ ಹೋಗಿತ್ತು.
ಮೆಟಾ-ಮಾಲೀಕತ್ವದ ವಾಟ್ಸಪ್ ಕೋರ್ಟ್​ನಲ್ಲಿ ವಾದಿಸಲು ತೇಜಸ್​ ಕರಿಯಾ ಅವರನ್ನು ನೇಮಕ ಮಾಡಿತ್ತು. ಅವರು ಎನ್​ಕ್ರಿಪ್ಟ್​ ಅನ್ನು ಭೇದಿಸಲು ಮುಂದಾದರೆ ಕಾನೂನನ್ನು ಅನುಸರಿಸುವ ಬದಲು ವಾಟ್ಸಪ್ ದೇಶಬಿಟ್ಟು ನಿರ್ಗಮಿಸುವುದಾಗಿ ತಿಳಿಸಿದ್ದರು.
/newsfirstlive-kannada/media/post_attachments/wp-content/uploads/2024/04/Whatsapp-2.jpg)
ಜೊತೆಗೆ ವಾಟ್ಸಪ್ ಹಲವು ವೈಶಿಷ್ಟ್ಯ ಜೊತೆಗೆ ಸುರಕ್ಷಿತವಾಗಿರುವುದರಿಂದ ಕೋಟ್ಯಾಂತರ ಜನರು ಬಳಸುತ್ತಿದ್ದಾರೆ. ಯುಪಿಐ ಪಾವತಿ ಸೇವೆ ಒದಗಿಸಿರುವ ದೇಶಗಳಲ್ಲಿ ವಾಟ್ಸಪ್​​ 400 ಮಿಲಿಯನ್​ ಸಕ್ರಿಯ ಬಳಕೆದಾರರನ್ನು ಹೊಂದಿದೆ ಎಂದು ಹೇಳಿದ್ದಾರೆ.
ಏನಿದು ಜಟಾಪಟಿ?
ಮಾಹಿತಿ ತಂತ್ರಜ್ಞಾನ ನಿಯಮ 2021ರ ಅಡಿಯಲ್ಲಿ ವಾಟ್ಸಪ್​ ಮತ್ತು ಇನ್ನಿತರ ಮೆಸೇಜಿಂಗ್ ​​ಆ್ಯಪ್​ಗಳ ಸಂದೇಶಗಳ ಮೂಲವನ್ನು ಪತ್ತೆ ಹಚ್ಚಲು ಸಲುವಾಗಿ ಎನ್​​ಕ್ರಿಪ್ಟ್​​ ನಿಯಮ ಸಡಿಲಗೊಳಿಸುವ ಅಗತ್ಯವಿದೆ ಎಂದು ಭಾರತ ಸರ್ಕಾರ ಹೇಳಿಕೊಂಡು ಬಂದಿದೆ. ಆದರೆ ವಾಟ್ಸಪ್ಬಳಕೆದಾರರಿಗೆ ಸುರಕ್ಷಿತವಾದ ವೈಶಿಷ್ಯದ ಜೊತೆಗೆ ಸೇವೆಯನ್ನು ನೀಡುತ್ತಿರುವಾಗ ಎನ್​ಕ್ರಿಪ್ಟ್​ ಸಡಿಲಗೊಳಿಸಲು ಸಾಧ್ಯವಿಲ್ಲ ಎಂದು ವಾದಿಸಿದೆ. ಜೊತೆಗೆ ಭಾರತೀಯ ಐಟಿ ನಿಯಮದ ಪ್ರಕಾರ ಮೆಟಾ ಒಡೆತನದ ವಾಟ್ಸಪ್ ಹೋರಾಡುತ್ತಿದೆ. ಮಾತ್ರವಲ್ಲದೆ ಭಾರತೀಯ ಸಂವಿಧಾನದ ಅಡಿಯಲ್ಲಿ ಬಳಕೆದಾರರ ಗೌಪ್ಯತೆ ಉಲ್ಲಂಘಿಸುವುದು ಸರಿಯಲ್ಲ ಎಂದು ಹೇಳಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us