newsfirstkannada.com

ಒಂದು ವರ್ಷದ ಹಿಂದೆ ಮದುವೆ.. ಕೊಲೆಯಾದ ರೇಣುಕಾಸ್ವಾಮಿ ಪತ್ನಿ ತುಂಬು ಗರ್ಭಿಣಿ..

Share :

Published June 11, 2024 at 12:08pm

    ಕಾಮಾಕ್ಷಿಪಾಳ್ಯ ಪೊಲೀಸರಿಂದ ನಟ ದರ್ಶನ್ ಅರೆಸ್ಟ್

    ಕೊಲೆ ಆರೋಪ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ಬಂಧನ

    2023ರ ಜೂನ್​ನಲ್ಲಿ ಮದುವೆ ಆಗಿದ್ದ ರೇಣುಕಾಸ್ವಾಮಿ

ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಂಧನ ಆಗಿದೆ. ಇದೀಗ ಕೊಲೆಯಾದ ರೇಣುಕಾಸ್ವಾಮಿಗೆ ಸಂಬಂಧಿಸಿದಂತೆ ಒಂದಷ್ಟು ಮಾಹಿತಿಗಳು ಲಭ್ಯವಾಗಿದೆ.

ಬೇಸರದ ವಿಚಾರ ಏನೆಂದರೆ ದರ್ಶನ್ ಕೊಟ್ಟ ಏಟಿಗೆ ಸಾವನ್ನಪ್ಪಿದ್ದಾನೆ ಎಂಬ ವ್ಯಕ್ತಿಗೆ ಮದುವೆ ಕೂಡ ಆಗಿದ್ದ. ಆತನ ಪತ್ನಿ ಐದು ತಿಂಗಳ ಗರ್ಭಿಣಿ ಎಂದು ತಿಳಿದು ಬಂದಿದೆ. ಸದ್ಯ ಪತಿ ಸಾವನ್ನಪ್ಪಿರುವ ಬಗ್ಗೆ ಆಕೆಗೆ ಯಾವುದೇ ಮಾಹಿತಿ ನೀಡಿಲ್ಲ ಎನ್ನಲಾಗಿದೆ.

ಇದನ್ನೂ ಓದಿ:10ಕ್ಕೂ ಹೆಚ್ಚು ಜನರ ವಶಕ್ಕೆ ಪಡೆಯಲಾಗಿದೆ -ದರ್ಶನ್ ಅರೆಸ್ಟ್ ಬಗ್ಗೆ ಪೊಲೀಸ್ ಕಮಿಷನರ್ ಸ್ಫೋಟಕ ಮಾಹಿತಿ

ರೇಣುಕಾಸ್ವಾಮಿ ಚಿತ್ರದುರ್ಗ ನಗರದ VRS ಬಡಾವಣೆಯ ನಿವಾಸಿ. ಕೆಇಬಿ ನಿವೃತ್ತ ನೌಕರ ಕಾಶಿನಾಥ್ ಶಿವಣ್ಣ ಗೌಡರ್, ರತ್ನಪ್ರಭಾ ಅವರ ಪುತ್ರ ರೇಣುಕಾಸ್ವಾಮಿ. 2023 ಜೂನ್ 28ರಂದು ರೇಣುಕಾಸ್ವಾಮಿ ವಿವಾಹ ಆಗಿದ್ದ. ಮದುವೆಯಾಗಿ ವರ್ಷ ತುಂಬುವ ಮುನ್ನವೇ ರೇಣುಕಾಸ್ವಾಮಿ ಕೊಲೆಯಾಗಿದ್ದಾನೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಬೆಂಗಳೂರಿನ ಅಪೋಲೋ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾಸ್ವಾಮಿ, ಶನಿವಾರ ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗದಿಂದ ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ.

ಇದನ್ನೂ ಓದಿ:ಡಿ ಬಾಸ್​ ದರ್ಶನ್​ ಅರೆಸ್ಟ್​.. ಸ್ಯಾಂಡಲ್​ವುಡ್​ ನಟ ಅರೆಸ್ಟ್ ಆಗಲು ಕಾರಣ?

ರೇಣುಕಾಸ್ವಾಮಿ ಬಾಡಿ ಸಿಕ್ಕಿದ್ದೆಲ್ಲಿ?

ಸತ್ವ ಅನುಗ್ರಹ ಅಪಾರ್ಟ್ ಮೆಂಟ್ ನ ಮುಂಭಾಗದಲ್ಲಿರುವ ಮೋರಿಯಲ್ಲಿ ರೇಣುಕಾಸ್ವಾಮಿ ಶವ ಪತ್ತೆಯಾಗಿದೆ. ಅಪರಿಚಿತ ಶವ ಪತ್ತೆ ಸಂಬಂಧ ಅಪಾರ್ಟ್ ಮೆಂಟ್ ಸೆಕ್ಯೂರಿಟಿ ಗಾರ್ಡ್ ದೂರು ನೀಡಿದ್ದರು. 30 ರಿಂದ 35 ವರ್ಷದ ವ್ಯಕ್ತಿ ಶವ ಪತ್ತೆಯಾಗಿದೆ ಎಂದು ಸೆಕ್ಯೂರಿಟಿ ಗಾರ್ಡ್ ದೂರು ನೀಡಿದ್ದರು. ರೇಣುಕಾಸ್ವಾಮಿ ಕಿವಿಗೆ ಹಾಗೂ ತಲೆಗೆ ಗಂಭೀರ ಗಾಯ ಆಗಿತ್ತು. ಪೊಲೀಸರು ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ನಡೆಸಿ ವೈದ್ಯರ ವರದಿ ಪಡೆದಿದ್ದರು. ಮುಖ, ತಲೆ ಹಾಗೂ ಕಿವಿಗೆ ತೀವ್ರವಾದ ಹಲ್ಲೆಯಾಗಿರೋದು ತಿಳಿದುಬಂದಿತ್ತು.

ಇದನ್ನೂ ಓದಿ:Breaking: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಒಂದು ವರ್ಷದ ಹಿಂದೆ ಮದುವೆ.. ಕೊಲೆಯಾದ ರೇಣುಕಾಸ್ವಾಮಿ ಪತ್ನಿ ತುಂಬು ಗರ್ಭಿಣಿ..

https://newsfirstlive.com/wp-content/uploads/2024/06/DARSHAN-5.jpg

    ಕಾಮಾಕ್ಷಿಪಾಳ್ಯ ಪೊಲೀಸರಿಂದ ನಟ ದರ್ಶನ್ ಅರೆಸ್ಟ್

    ಕೊಲೆ ಆರೋಪ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ಬಂಧನ

    2023ರ ಜೂನ್​ನಲ್ಲಿ ಮದುವೆ ಆಗಿದ್ದ ರೇಣುಕಾಸ್ವಾಮಿ

ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಂಧನ ಆಗಿದೆ. ಇದೀಗ ಕೊಲೆಯಾದ ರೇಣುಕಾಸ್ವಾಮಿಗೆ ಸಂಬಂಧಿಸಿದಂತೆ ಒಂದಷ್ಟು ಮಾಹಿತಿಗಳು ಲಭ್ಯವಾಗಿದೆ.

ಬೇಸರದ ವಿಚಾರ ಏನೆಂದರೆ ದರ್ಶನ್ ಕೊಟ್ಟ ಏಟಿಗೆ ಸಾವನ್ನಪ್ಪಿದ್ದಾನೆ ಎಂಬ ವ್ಯಕ್ತಿಗೆ ಮದುವೆ ಕೂಡ ಆಗಿದ್ದ. ಆತನ ಪತ್ನಿ ಐದು ತಿಂಗಳ ಗರ್ಭಿಣಿ ಎಂದು ತಿಳಿದು ಬಂದಿದೆ. ಸದ್ಯ ಪತಿ ಸಾವನ್ನಪ್ಪಿರುವ ಬಗ್ಗೆ ಆಕೆಗೆ ಯಾವುದೇ ಮಾಹಿತಿ ನೀಡಿಲ್ಲ ಎನ್ನಲಾಗಿದೆ.

ಇದನ್ನೂ ಓದಿ:10ಕ್ಕೂ ಹೆಚ್ಚು ಜನರ ವಶಕ್ಕೆ ಪಡೆಯಲಾಗಿದೆ -ದರ್ಶನ್ ಅರೆಸ್ಟ್ ಬಗ್ಗೆ ಪೊಲೀಸ್ ಕಮಿಷನರ್ ಸ್ಫೋಟಕ ಮಾಹಿತಿ

ರೇಣುಕಾಸ್ವಾಮಿ ಚಿತ್ರದುರ್ಗ ನಗರದ VRS ಬಡಾವಣೆಯ ನಿವಾಸಿ. ಕೆಇಬಿ ನಿವೃತ್ತ ನೌಕರ ಕಾಶಿನಾಥ್ ಶಿವಣ್ಣ ಗೌಡರ್, ರತ್ನಪ್ರಭಾ ಅವರ ಪುತ್ರ ರೇಣುಕಾಸ್ವಾಮಿ. 2023 ಜೂನ್ 28ರಂದು ರೇಣುಕಾಸ್ವಾಮಿ ವಿವಾಹ ಆಗಿದ್ದ. ಮದುವೆಯಾಗಿ ವರ್ಷ ತುಂಬುವ ಮುನ್ನವೇ ರೇಣುಕಾಸ್ವಾಮಿ ಕೊಲೆಯಾಗಿದ್ದಾನೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಬೆಂಗಳೂರಿನ ಅಪೋಲೋ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾಸ್ವಾಮಿ, ಶನಿವಾರ ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗದಿಂದ ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ.

ಇದನ್ನೂ ಓದಿ:ಡಿ ಬಾಸ್​ ದರ್ಶನ್​ ಅರೆಸ್ಟ್​.. ಸ್ಯಾಂಡಲ್​ವುಡ್​ ನಟ ಅರೆಸ್ಟ್ ಆಗಲು ಕಾರಣ?

ರೇಣುಕಾಸ್ವಾಮಿ ಬಾಡಿ ಸಿಕ್ಕಿದ್ದೆಲ್ಲಿ?

ಸತ್ವ ಅನುಗ್ರಹ ಅಪಾರ್ಟ್ ಮೆಂಟ್ ನ ಮುಂಭಾಗದಲ್ಲಿರುವ ಮೋರಿಯಲ್ಲಿ ರೇಣುಕಾಸ್ವಾಮಿ ಶವ ಪತ್ತೆಯಾಗಿದೆ. ಅಪರಿಚಿತ ಶವ ಪತ್ತೆ ಸಂಬಂಧ ಅಪಾರ್ಟ್ ಮೆಂಟ್ ಸೆಕ್ಯೂರಿಟಿ ಗಾರ್ಡ್ ದೂರು ನೀಡಿದ್ದರು. 30 ರಿಂದ 35 ವರ್ಷದ ವ್ಯಕ್ತಿ ಶವ ಪತ್ತೆಯಾಗಿದೆ ಎಂದು ಸೆಕ್ಯೂರಿಟಿ ಗಾರ್ಡ್ ದೂರು ನೀಡಿದ್ದರು. ರೇಣುಕಾಸ್ವಾಮಿ ಕಿವಿಗೆ ಹಾಗೂ ತಲೆಗೆ ಗಂಭೀರ ಗಾಯ ಆಗಿತ್ತು. ಪೊಲೀಸರು ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ನಡೆಸಿ ವೈದ್ಯರ ವರದಿ ಪಡೆದಿದ್ದರು. ಮುಖ, ತಲೆ ಹಾಗೂ ಕಿವಿಗೆ ತೀವ್ರವಾದ ಹಲ್ಲೆಯಾಗಿರೋದು ತಿಳಿದುಬಂದಿತ್ತು.

ಇದನ್ನೂ ಓದಿ:Breaking: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More