ಕುತೂಹಲ ಮೂಡಿಸಿದ ಟಿ20 ಸರಣಿಯ ಕೊನೆಯ ಪಂದ್ಯ
ಇವತ್ತಿನ ಪಂದ್ಯ ಗೆದ್ದ ತಂಡಕ್ಕೆ ಸರಣಿಯ ವಿಜಯಮಾಲೆ..!
ಜೈಸ್ವಾಲ್, ಗಿಲ್, ತಿಲಕ್, ಸೂರ್ಯ ತಂಡದ ಬ್ಯಾಟಿಂಗ್ ಬಲ
ವೆಸ್ಟ್ ಇಂಡೀಸ್ ವಿರುದ್ಧದ 5ನೇ ಮತ್ತು ಕೊನೆಯ ಟಿ20 ಪಂದ್ಯವು ಫ್ಲೋರಿಡಾದ ಲಾಡರ್ಹಿಲ್ನಲ್ಲಿನ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್ನಲ್ಲಿ ನಡೆಯುತ್ತಿದೆ. ಟಾಸ್ ಗೆದ್ದಿರುವ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತದ ಪರ ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್ ಓಪರನ್ಸ್ ಆಗಿ ಕ್ರೀಸ್ಗೆ ಇಳಿಯಲಿದ್ದಾರೆ. ತಿಲಕ್ ವರ್ಮಾ, ಸೂರ್ಯಕುಮಾರ್, ಸಂಜು ಸ್ಯಾಮ್ಸನ್ ಮಿಡಲ್ ಆರ್ಡರ್ನಲ್ಲಿ ಬ್ಯಾಟ್ ಬೀಸಲಿದ್ದಾರೆ. ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಆಲ್ ರೌಂಡರ್ಗಳಾಗಿ ಕಣಕ್ಕೆ ಇಳಿಯಲಿದ್ದು ಭಾರತದ ಪರ ಕುಲ್ದೀಪ್ ಯಾದವ್, ಚಹಲ್ ಸ್ಪಿನ್ನರ್ಗಳಾಗಿ ತಂಡದಲ್ಲಿ ಸ್ಥಾನ ಪಡೆದಿದ್ದು ಎದುರಾಳಿಯನ್ನು ಕಟ್ಟಿ ಹಾಕುವ ಪ್ಲಾನ್ನಲ್ಲಿದ್ದಾರೆ. ಇನ್ನು ವಿಂಡೀಸ್ ಕೂಡ ಟೆಸ್ಟ್ ಹಾಗೂ ಏಕದಿನ ಸರಣಿಗಳನ್ನ ಸೋತಿದ್ದು ಟಿ20 ಸರಣಿಯನ್ನು ಕೈವಶ ಮಾಡಿಕೊಳ್ಳಲು ರಣತಂತ್ರ ರೂಪಿಸಿದೆ ಎಂದು ಹೇಳಲಾಗಿದೆ.
ಕ್ಯಾಪ್ಟನ್ ರೋವಮನ್ ಪೊವೆಲ್, ವಿಕೆಟ್ ಕೀಪರ್ ನಿಕೋಲಸ್ ಪೂರನ್, ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಶಾಯ್ ಹೋಪ್ ವಿಂಡೀಸ್ ಪರ ಉತ್ತಮ ಬ್ಯಾಟಿಂಗ್ ಲೈನ್ ಹೊಂದಿದ್ದಾರೆ. ಪೊವೆಲ್ರ ಸಾರಥ್ಯದ ವಿಂಡೀಸ್ ಪಡೆ ಮೊದಲ 2 ಪಂದ್ಯಗಳನ್ನು ಗೆದ್ದು ಇನ್ನೇನು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿತ್ತು. ಆದರೆ ನಿರ್ದಿಷ್ಟ ಹೋರಾಟದಿಂದ 3 ಮತ್ತು 4ನೇ ಪಂದ್ಯವನ್ನು ಹಾರ್ದಿಕ್ ಸಾರಥ್ಯದ ಟೀಮ್ ಇಂಡಿಯಾ ಗೆದ್ದುಕೊಂಡಿತ್ತು. ಇದು ವಿಂಡೀಸ್ಗೆ ಭಾರೀ ಆಘಾತವನ್ನುಂಟು ಮಾಡಿದೆ. ಇದರಿಂದ ಸರಣಿಯಲ್ಲಿ ಎರಡು ತಂಡಗಳು ಸಮಬಲ ಸಾಧಿಸಿದ್ದು ಸದ್ಯ ನಡೆಯುತ್ತಿರುವ ಪಂದ್ಯವನ್ನು ಗೆಲ್ಲುವ ತಂಡಕ್ಕೆ ಸರಣಿ ಕೈವಶವಾಗಲಿದೆ.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್:
ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಸೂರ್ಯಕುಮಾರ್, ತಿಲಕ್ ವರ್ಮಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಚಹಲ್, ಮುಖೇಶ್ ಕುಮಾರ್.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಕುತೂಹಲ ಮೂಡಿಸಿದ ಟಿ20 ಸರಣಿಯ ಕೊನೆಯ ಪಂದ್ಯ
ಇವತ್ತಿನ ಪಂದ್ಯ ಗೆದ್ದ ತಂಡಕ್ಕೆ ಸರಣಿಯ ವಿಜಯಮಾಲೆ..!
ಜೈಸ್ವಾಲ್, ಗಿಲ್, ತಿಲಕ್, ಸೂರ್ಯ ತಂಡದ ಬ್ಯಾಟಿಂಗ್ ಬಲ
ವೆಸ್ಟ್ ಇಂಡೀಸ್ ವಿರುದ್ಧದ 5ನೇ ಮತ್ತು ಕೊನೆಯ ಟಿ20 ಪಂದ್ಯವು ಫ್ಲೋರಿಡಾದ ಲಾಡರ್ಹಿಲ್ನಲ್ಲಿನ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್ನಲ್ಲಿ ನಡೆಯುತ್ತಿದೆ. ಟಾಸ್ ಗೆದ್ದಿರುವ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತದ ಪರ ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್ ಓಪರನ್ಸ್ ಆಗಿ ಕ್ರೀಸ್ಗೆ ಇಳಿಯಲಿದ್ದಾರೆ. ತಿಲಕ್ ವರ್ಮಾ, ಸೂರ್ಯಕುಮಾರ್, ಸಂಜು ಸ್ಯಾಮ್ಸನ್ ಮಿಡಲ್ ಆರ್ಡರ್ನಲ್ಲಿ ಬ್ಯಾಟ್ ಬೀಸಲಿದ್ದಾರೆ. ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಆಲ್ ರೌಂಡರ್ಗಳಾಗಿ ಕಣಕ್ಕೆ ಇಳಿಯಲಿದ್ದು ಭಾರತದ ಪರ ಕುಲ್ದೀಪ್ ಯಾದವ್, ಚಹಲ್ ಸ್ಪಿನ್ನರ್ಗಳಾಗಿ ತಂಡದಲ್ಲಿ ಸ್ಥಾನ ಪಡೆದಿದ್ದು ಎದುರಾಳಿಯನ್ನು ಕಟ್ಟಿ ಹಾಕುವ ಪ್ಲಾನ್ನಲ್ಲಿದ್ದಾರೆ. ಇನ್ನು ವಿಂಡೀಸ್ ಕೂಡ ಟೆಸ್ಟ್ ಹಾಗೂ ಏಕದಿನ ಸರಣಿಗಳನ್ನ ಸೋತಿದ್ದು ಟಿ20 ಸರಣಿಯನ್ನು ಕೈವಶ ಮಾಡಿಕೊಳ್ಳಲು ರಣತಂತ್ರ ರೂಪಿಸಿದೆ ಎಂದು ಹೇಳಲಾಗಿದೆ.
ಕ್ಯಾಪ್ಟನ್ ರೋವಮನ್ ಪೊವೆಲ್, ವಿಕೆಟ್ ಕೀಪರ್ ನಿಕೋಲಸ್ ಪೂರನ್, ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಶಾಯ್ ಹೋಪ್ ವಿಂಡೀಸ್ ಪರ ಉತ್ತಮ ಬ್ಯಾಟಿಂಗ್ ಲೈನ್ ಹೊಂದಿದ್ದಾರೆ. ಪೊವೆಲ್ರ ಸಾರಥ್ಯದ ವಿಂಡೀಸ್ ಪಡೆ ಮೊದಲ 2 ಪಂದ್ಯಗಳನ್ನು ಗೆದ್ದು ಇನ್ನೇನು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿತ್ತು. ಆದರೆ ನಿರ್ದಿಷ್ಟ ಹೋರಾಟದಿಂದ 3 ಮತ್ತು 4ನೇ ಪಂದ್ಯವನ್ನು ಹಾರ್ದಿಕ್ ಸಾರಥ್ಯದ ಟೀಮ್ ಇಂಡಿಯಾ ಗೆದ್ದುಕೊಂಡಿತ್ತು. ಇದು ವಿಂಡೀಸ್ಗೆ ಭಾರೀ ಆಘಾತವನ್ನುಂಟು ಮಾಡಿದೆ. ಇದರಿಂದ ಸರಣಿಯಲ್ಲಿ ಎರಡು ತಂಡಗಳು ಸಮಬಲ ಸಾಧಿಸಿದ್ದು ಸದ್ಯ ನಡೆಯುತ್ತಿರುವ ಪಂದ್ಯವನ್ನು ಗೆಲ್ಲುವ ತಂಡಕ್ಕೆ ಸರಣಿ ಕೈವಶವಾಗಲಿದೆ.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್:
ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಸೂರ್ಯಕುಮಾರ್, ತಿಲಕ್ ವರ್ಮಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಚಹಲ್, ಮುಖೇಶ್ ಕುಮಾರ್.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ