/newsfirstlive-kannada/media/post_attachments/wp-content/uploads/2024/08/Mandya-4.jpg)
ಕೌಟುಂಬಿಕ ಕಲಹ ಹಿನ್ನೆಲೆ, ಪಾಪಿ ಪತಿಯೊಬ್ಬ ತನ್ನ ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಡ್ಯದ ಮಂಥನಹಳ್ಳಿ ಗ್ರಾಮದಲ್ಲಿ ನಡೆದಿದೆ. ತೇಜಸ್ವಿನಿ ಕೊಲೆಯಾದ ಮಹಿಳೆ. ಜಯರಾಮು ಕೊಲೆಗೈದ ದುರ್ದೈವಿ.
ಇದನ್ನೂ ಓದಿ: ಮನೆ ಬಳಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಮಗ.. ಸಾವಿನಲ್ಲೂ ಸಾರ್ಥಕತೆ ಮೆರೆದು ಬೆಳಕಾದ
ಕೌಟುಂಬಿಕ ವಿಚಾರವಾಗಿ ದಂಪತಿಗಳ ನಡುವೆ ಜಗಳ ಶುರುವಾಗಿದೆ. ಬಳಿಕ ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿದೆ. ಕೋಪಗೊಂಡಿದ್ದ ಪತಿ ಜಯರಾಮು ತನ್ನ ಪತ್ನಿ ತೇಜಸ್ವಿನಿ ಕುತ್ತಿಗೆಗೆ ಸ್ಕ್ರೂಡ್ರೈವರ್​ನಿಂದ ಚುಚ್ಚಿದ್ದಾನೆ.
ಸ್ಕ್ರೂಡ್ರೈವರ್​ನಿಂದ ಚುಚ್ಚಿರೋದು ಮಾತ್ರವಲ್ಲದೆ, ಬಳಿಕ ತಲೆಗೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವದಿಂದ ತೇಜಸ್ವಿನಿ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಇದನ್ನೂ ಓದಿ: ಸಾವಿನ ಸಂಖ್ಯೆ 18ಕ್ಕೆ ಏರಿಕೆ, 40ಕ್ಕೂ ಹೆಚ್ಚು ಜನರಿಗೆ ಗಾಯ.. ಫಾಕ್ಟರಿ ಸ್ಫೋಟದಲ್ಲಿ 380 ಮಂದಿ ಏನಾದ್ರು?
ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us