newsfirstkannada.com

ಅನೈತಿಕ ಸಂಬಂಧಕ್ಕೆ ಅಡ್ಡಿ; ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದು ಬಿಟ್ಟಳು!

Share :

23-06-2023

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನೇ ಬರ್ಬರವಾಗಿ ಕೊಲೆ ಮಾಡಿದ ಪತ್ನಿ

    ಪೊಲೀಸ್​​ ತನಿಖೆಯಲ್ಲಿ ಅಸಲಿ ಸತ್ಯ ಬಾಯ್ಬಿಟ್ಟ ಕೇಸ್​​ನ ಪ್ರಮುಖ ಆರೋಪಿಗಳು..!

    ಪತಿಯನ್ನ ಕೊಲೆ ಮಾಡಿ, ಶವವನ್ನು ಗೋವಾದ ಚೋರ್ಲಾ ಘಾಟ್​ನಲ್ಲಿ ಎಸೆದ ಪತ್ನಿ!

ಬೆಳಗಾವಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನ ಪ್ರಿಯಕರನ ಜೊತೆ ಸೇರಿ ಪತ್ನಿಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಮೃತ ರಮೇಶ್ ಕಾಂಬಳೆ (38) ಕೊಲೆಯಾದ ಪತಿ.

ಸದ್ಯ ಈ ಸಂಬಂಧ ನಾಲ್ವರು ಆರೋಪಿಗಳನ್ನ ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿ ರಮೇಶ್​​ ಅಂಬೇಡ್ಕರ್ ನಗರದ ನಿವಾಸಿ. ವೃತ್ತಿಯಲ್ಲಿ ಪೇಂಟರ್ ಆಗಿದ್ದರು. ರಮೇಶ್​​ ಏಕಾಏಕಿ ಮಾರ್ಚ್​ 28ರಂದು ನಾಪತ್ತೆಯಾಗಿದ್ದ. ಈ ಕುರಿತು ಏಪ್ರಿಲ್​ 5ರಂದು ಆತನ ಪತ್ನಿ ಸಂಧ್ಯಾ ಪೊಲೀಸ್​​ ಅಧಿಕಾರಿಗಳಿಗೆ ದೂರು ನೀಡಿದ್ದಳು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಲು ಶುರು ಮಾಡಿದ ಬಳಿಕ ಅಸಲಿ ಸತ್ಯ ಬೆಳಕಿಗೆ ಬಂದಿದೆ.

ಇನ್ನು, ರಮೇಶ್ ಸ್ನೇಹಿತ ಬಾಳು ಬಿರಂಜೆ ಎಂಬಾತನೊಂದಿಗೆ ಪತ್ನಿ ಸಂಧ್ಯಾ ಅನೈತಿಕ ಸಂಬಂಧ ಇತ್ತು. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ರಮೇಶ್​ನನ್ನು ಸ್ನೇಹಿತರು ಜೊತೆಗೂಡಿ ಕೊಲೆ ಮಾಡಿ, ಗೋವಾದ ಚೋರ್ಲಾ ಘಾಟ್​ನಲ್ಲಿ ಶವ ಎಸೆದಿರುವುದಾಗಿ ಪೊಲೀಸ್​​ ಅಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಪತ್ನಿ ಸಂಧ್ಯಾ ಯಾರಿಗೂ ಅನುಮಾನ ಬಾರದಂತೆ ಪತಿ ಪರಸ್ತ್ರೀಯೊಂದಿಗೆ ಓಡಿ ಹೋಗಿದ್ದಾನೆ ಎಂದು ಕಥೆ ಕಟ್ಟಿದ್ದಳು. ರಮೇಶ್​ಗೆ​ ನಿದ್ರೆ ಮಾತ್ರೆಯನ್ನ ನೀಡಿ, ಬಳಿಕ ಕತ್ತು ಹಿಸುಕಿ ಕೊಲೆಗೈದಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಈ ಸಂಬಂಧ ಕೊಲೆಯಲ್ಲಿ ಶಾಮೀಲಾಗಿದ್ದ ನಾಲ್ವರು ಆರೋಪಿಗಳನ್ನು ಎಪಿಎಂಸಿ ಪೊಲೀಸರು ಬಂಧಿಸಿ, ರಮೇಶ್ ಮೃತದೇಹ ಪತ್ತೆಗೆ ಮುಂದಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

ಅನೈತಿಕ ಸಂಬಂಧಕ್ಕೆ ಅಡ್ಡಿ; ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದು ಬಿಟ್ಟಳು!

https://newsfirstlive.com/wp-content/uploads/2023/06/fake-love.jpg

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನೇ ಬರ್ಬರವಾಗಿ ಕೊಲೆ ಮಾಡಿದ ಪತ್ನಿ

    ಪೊಲೀಸ್​​ ತನಿಖೆಯಲ್ಲಿ ಅಸಲಿ ಸತ್ಯ ಬಾಯ್ಬಿಟ್ಟ ಕೇಸ್​​ನ ಪ್ರಮುಖ ಆರೋಪಿಗಳು..!

    ಪತಿಯನ್ನ ಕೊಲೆ ಮಾಡಿ, ಶವವನ್ನು ಗೋವಾದ ಚೋರ್ಲಾ ಘಾಟ್​ನಲ್ಲಿ ಎಸೆದ ಪತ್ನಿ!

ಬೆಳಗಾವಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನ ಪ್ರಿಯಕರನ ಜೊತೆ ಸೇರಿ ಪತ್ನಿಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಮೃತ ರಮೇಶ್ ಕಾಂಬಳೆ (38) ಕೊಲೆಯಾದ ಪತಿ.

ಸದ್ಯ ಈ ಸಂಬಂಧ ನಾಲ್ವರು ಆರೋಪಿಗಳನ್ನ ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿ ರಮೇಶ್​​ ಅಂಬೇಡ್ಕರ್ ನಗರದ ನಿವಾಸಿ. ವೃತ್ತಿಯಲ್ಲಿ ಪೇಂಟರ್ ಆಗಿದ್ದರು. ರಮೇಶ್​​ ಏಕಾಏಕಿ ಮಾರ್ಚ್​ 28ರಂದು ನಾಪತ್ತೆಯಾಗಿದ್ದ. ಈ ಕುರಿತು ಏಪ್ರಿಲ್​ 5ರಂದು ಆತನ ಪತ್ನಿ ಸಂಧ್ಯಾ ಪೊಲೀಸ್​​ ಅಧಿಕಾರಿಗಳಿಗೆ ದೂರು ನೀಡಿದ್ದಳು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಲು ಶುರು ಮಾಡಿದ ಬಳಿಕ ಅಸಲಿ ಸತ್ಯ ಬೆಳಕಿಗೆ ಬಂದಿದೆ.

ಇನ್ನು, ರಮೇಶ್ ಸ್ನೇಹಿತ ಬಾಳು ಬಿರಂಜೆ ಎಂಬಾತನೊಂದಿಗೆ ಪತ್ನಿ ಸಂಧ್ಯಾ ಅನೈತಿಕ ಸಂಬಂಧ ಇತ್ತು. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ರಮೇಶ್​ನನ್ನು ಸ್ನೇಹಿತರು ಜೊತೆಗೂಡಿ ಕೊಲೆ ಮಾಡಿ, ಗೋವಾದ ಚೋರ್ಲಾ ಘಾಟ್​ನಲ್ಲಿ ಶವ ಎಸೆದಿರುವುದಾಗಿ ಪೊಲೀಸ್​​ ಅಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಪತ್ನಿ ಸಂಧ್ಯಾ ಯಾರಿಗೂ ಅನುಮಾನ ಬಾರದಂತೆ ಪತಿ ಪರಸ್ತ್ರೀಯೊಂದಿಗೆ ಓಡಿ ಹೋಗಿದ್ದಾನೆ ಎಂದು ಕಥೆ ಕಟ್ಟಿದ್ದಳು. ರಮೇಶ್​ಗೆ​ ನಿದ್ರೆ ಮಾತ್ರೆಯನ್ನ ನೀಡಿ, ಬಳಿಕ ಕತ್ತು ಹಿಸುಕಿ ಕೊಲೆಗೈದಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಈ ಸಂಬಂಧ ಕೊಲೆಯಲ್ಲಿ ಶಾಮೀಲಾಗಿದ್ದ ನಾಲ್ವರು ಆರೋಪಿಗಳನ್ನು ಎಪಿಎಂಸಿ ಪೊಲೀಸರು ಬಂಧಿಸಿ, ರಮೇಶ್ ಮೃತದೇಹ ಪತ್ತೆಗೆ ಮುಂದಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

Load More