/newsfirstlive-kannada/media/post_attachments/wp-content/uploads/2024/04/KLR_ELEPHANT.jpg)
ಕೋಲಾರ: ಅರಣ್ಯ ಪ್ರದೇಶದಲ್ಲಿರುವ ಮಲ್ಲೇಶ್ವರಸ್ವಾಮಿ ದೇವಾಲಯಕ್ಕೆ ಬಂದಿದ್ದ ವೃದ್ಧರೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಹಿನ್ನೆಲೆ ಮೃತಪಟ್ಟಿದ್ದಾರೆ. ಈ ಘಟನೆಯು ಬಂಗಾರಪೇಟೆ ತಾಲೂಕಿನ ಮೂತನೂರು ಗ್ರಾಮದ ಬಳಿ ನಡೆದಿದೆ.
ತಮಿಳುನಾಡು ಮೂಲದ ಚಿಕ್ಕ ಬೀರಪ್ಪ (60) ಮೃತ ದುರ್ದೈವಿ. ಮೂತನೂರು ಗ್ರಾಮದ ಬಳಿ ಇರುವ ಅರಣ್ಯ ಪ್ರದೇಶದಲ್ಲಿ ಮಲ್ಲೇಶ್ವರಸ್ವಾಮಿ ದೇವಾಲಯವಿದೆ. ಇಲ್ಲಿಗೆ ದೇವರ ದರ್ಶನ ಪಡೆಯಲೆಂದು ವೃದ್ಧ ಬಂದಿದ್ದರು. ಈ ವೇಳೆ ವೃದ್ಧನ ಮೇಲೆ ಆನೆ ದಾಳಿ ಮಾಡಿ ಬಲಿ ಪಡೆದುಕೊಂಡಿದೆ. ಆನೆ ದಾಳಿಯಿಂದ ಮೃತದೇಹವೆಲ್ಲ ಮಾಂಸದ ಮುದ್ದೆಯಂತಾಗಿದೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us