5 ಕೆಜಿ ಅಕ್ಕಿ ಜೊತೆಗೆ ಉಳಿದ 5 ಕೆಜಿಗೆ ಹಣ ಕೊಡುತ್ತಿರುವ ಸರ್ಕಾರ
ಎಲ್ಲಿವರೆಗೂ ಕಡಿಮೆ ರೇಟ್ಗೆ ಅಕ್ಕಿ ಸಿಗಲ್ಲ ಅಲ್ಲಿವರೆಗೂ ಹಣ ಕೊಡ್ತೀವಿ
5 ಕೆಜಿ ಅಕ್ಕಿ ಬದಲು ಹಣ ಕೊಡಲು ಕ್ಯಾಬೆನೆಟ್ನಲ್ಲಿ ಮಹತ್ವದ ತೀರ್ಮಾನ
ಬೆಂಗಳೂರು: ಅನ್ನಭಾಗ್ಯ ಯೋಜನೆಯಲ್ಲಿ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಭರವಸೆ ನೀಡಿರೋ ರಾಜ್ಯ ಸರ್ಕಾರ ಮತ್ತೊಮ್ಮೆ ಮಹತ್ವದ ತೀರ್ಮಾನ ಕೈಗೊಂಡಿದೆ. 5 ಕೆಜಿ ಅಕ್ಕಿ ಜೊತೆಗೆ ಉಳಿದ 5 ಅಕ್ಕಿಗೆ ಹಣ ಕೊಡ್ತೀವಿ ಎಂದು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಎಲ್ಲಿವರೆಗೂ ಅಕ್ಕಿ ಸಿಗಲ್ಲ ಅಲ್ಲಿವರೆಗೂ ಹಣ ಕೊಡ್ತೀವಿ. ಆಂಧ್ರಪ್ರದೇಶ, ತೆಲಂಗಾಣದಲ್ಲಿ ರೇಟ್ ಜಾಸ್ತಿ ಇದೆ. ನಾವು FCI ಕೊಡೋ ರೇಟ್ ಕೇಳ್ತಾ ಇದ್ದೇವೆ. ಆ ದರಕ್ಕೆ ಅವರು ಕೊಡ್ತಿಲ್ಲ. ನಮ್ಮ ದರಕ್ಕೆ ಅಕ್ಕಿ ಸಿಗ್ತಾ ಇಲ್ಲ, ಅಕ್ಕಿ ಸಿಕ್ಕ ತಕ್ಷಣ 10 ಕೆಜಿ ಅಕ್ಕಿಯನ್ನೇ ಕೊಡುತ್ತೇವೆ. ಹೀಗಾಗಿ ಅಕ್ಕಿ ಬದಲು ಹಣ ಕೊಡಲು ಕ್ಯಾಬೆನೆಟ್ನಲ್ಲಿ ತೀರ್ಮಾನಿಸಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿಕೆ ನೀಡಿದ್ದಾರೆ.
ಇನ್ನು, ಸಚಿವ ಸಂಪುಟ ಸಭೆಯಲ್ಲಿ ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಯ ಹೋರಾಟಗಳಲ್ಲಿ ಭಾಗವಹಿಸಿದ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ವಿಧಾನ ಪರಿಷತ್ ಶಾಸಕ ದಿನೇಶ ಗೂಳಿಗೌಡ ಅವರು ಮಾಡಿದ್ದ ಮನವಿಗೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಪ್ರಕರಣಗಳನ್ನು ಹಿಂಪಡೆಯುವ ವಿಚಾರವಾಗಿ ಸಚಿವ ಸಂಪುಟ ಉಪ ಸಮಿತಿಯ ಮುಂದೆ ಕಡತ ಮಂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಕ್ಯಾಬಿನೆಟ್ ಮುಂದೆ ತರಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
ದಿನೇಶ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಕೈಬಿಡುವಂತೆ ಕ್ರಮ ವಹಿಸಲು ಮನವಿ ಸಲ್ಲಿಸಿದ್ದರು. ಅದಕ್ಕೆ ಸಿಎಂ ಶೀಘ್ರ ಸ್ಪಂದನೆ ನೀಡಿರುವುದಕ್ಕೆ ಶಾಸಕ ದಿನೇಶ್ ಗೂಳಿಗೌಡ ಅವರು ಧನ್ಯವಾದ ಸಲ್ಲಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
5 ಕೆಜಿ ಅಕ್ಕಿ ಜೊತೆಗೆ ಉಳಿದ 5 ಕೆಜಿಗೆ ಹಣ ಕೊಡುತ್ತಿರುವ ಸರ್ಕಾರ
ಎಲ್ಲಿವರೆಗೂ ಕಡಿಮೆ ರೇಟ್ಗೆ ಅಕ್ಕಿ ಸಿಗಲ್ಲ ಅಲ್ಲಿವರೆಗೂ ಹಣ ಕೊಡ್ತೀವಿ
5 ಕೆಜಿ ಅಕ್ಕಿ ಬದಲು ಹಣ ಕೊಡಲು ಕ್ಯಾಬೆನೆಟ್ನಲ್ಲಿ ಮಹತ್ವದ ತೀರ್ಮಾನ
ಬೆಂಗಳೂರು: ಅನ್ನಭಾಗ್ಯ ಯೋಜನೆಯಲ್ಲಿ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಭರವಸೆ ನೀಡಿರೋ ರಾಜ್ಯ ಸರ್ಕಾರ ಮತ್ತೊಮ್ಮೆ ಮಹತ್ವದ ತೀರ್ಮಾನ ಕೈಗೊಂಡಿದೆ. 5 ಕೆಜಿ ಅಕ್ಕಿ ಜೊತೆಗೆ ಉಳಿದ 5 ಅಕ್ಕಿಗೆ ಹಣ ಕೊಡ್ತೀವಿ ಎಂದು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಎಲ್ಲಿವರೆಗೂ ಅಕ್ಕಿ ಸಿಗಲ್ಲ ಅಲ್ಲಿವರೆಗೂ ಹಣ ಕೊಡ್ತೀವಿ. ಆಂಧ್ರಪ್ರದೇಶ, ತೆಲಂಗಾಣದಲ್ಲಿ ರೇಟ್ ಜಾಸ್ತಿ ಇದೆ. ನಾವು FCI ಕೊಡೋ ರೇಟ್ ಕೇಳ್ತಾ ಇದ್ದೇವೆ. ಆ ದರಕ್ಕೆ ಅವರು ಕೊಡ್ತಿಲ್ಲ. ನಮ್ಮ ದರಕ್ಕೆ ಅಕ್ಕಿ ಸಿಗ್ತಾ ಇಲ್ಲ, ಅಕ್ಕಿ ಸಿಕ್ಕ ತಕ್ಷಣ 10 ಕೆಜಿ ಅಕ್ಕಿಯನ್ನೇ ಕೊಡುತ್ತೇವೆ. ಹೀಗಾಗಿ ಅಕ್ಕಿ ಬದಲು ಹಣ ಕೊಡಲು ಕ್ಯಾಬೆನೆಟ್ನಲ್ಲಿ ತೀರ್ಮಾನಿಸಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿಕೆ ನೀಡಿದ್ದಾರೆ.
ಇನ್ನು, ಸಚಿವ ಸಂಪುಟ ಸಭೆಯಲ್ಲಿ ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಯ ಹೋರಾಟಗಳಲ್ಲಿ ಭಾಗವಹಿಸಿದ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ವಿಧಾನ ಪರಿಷತ್ ಶಾಸಕ ದಿನೇಶ ಗೂಳಿಗೌಡ ಅವರು ಮಾಡಿದ್ದ ಮನವಿಗೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಪ್ರಕರಣಗಳನ್ನು ಹಿಂಪಡೆಯುವ ವಿಚಾರವಾಗಿ ಸಚಿವ ಸಂಪುಟ ಉಪ ಸಮಿತಿಯ ಮುಂದೆ ಕಡತ ಮಂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಕ್ಯಾಬಿನೆಟ್ ಮುಂದೆ ತರಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
ದಿನೇಶ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಕೈಬಿಡುವಂತೆ ಕ್ರಮ ವಹಿಸಲು ಮನವಿ ಸಲ್ಲಿಸಿದ್ದರು. ಅದಕ್ಕೆ ಸಿಎಂ ಶೀಘ್ರ ಸ್ಪಂದನೆ ನೀಡಿರುವುದಕ್ಕೆ ಶಾಸಕ ದಿನೇಶ್ ಗೂಳಿಗೌಡ ಅವರು ಧನ್ಯವಾದ ಸಲ್ಲಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ