newsfirstkannada.com

ಗೃಹಿಣಿ ಅನುಮಾನಾಸ್ಪದ ಸಾವಿಗೆ ರೊಚ್ಚಿಗೆದ್ದ ಗ್ರಾಮಸ್ಥರು; ಗಂಡನ ಮನೆಗೆ ಮುತ್ತಿಗೆ ಹಾಕಿ ಬಂಧಿಸಲು ಪಟ್ಟು

Share :

Published July 12, 2023 at 8:20pm

Update July 12, 2023 at 8:22pm

    ಬಳ್ಳಾರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ

    ಗೃಹಿಣಿ ಸಾವಿಗೆ ಆಕೆಯ ಗಂಡನೇ ಕಾರಣ ಎಂದ ಗ್ರಾಮಸ್ಥರು

    ಮಹಿಳೆಯ ಅಂತಿಮ ಸಂಸ್ಕಾರ ಬಳಿಕ ಗ್ರಾಮಸ್ಥರಿಂದ ಗಲಾಟೆ

ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ಗೃಹಿಣಿಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಅಂಜಲಿ ಮೃತ ಗೃಹಿಣಿ. ಇದೀಗ ಆಕೆಯ ಸಾವಿನ ಕುರಿತಂತೆ ಗಂಡ ಗಂಗಾಧರ ಹೆಂಡತಿಯನ್ನು ಕೊಲೆ ಮಾಡಿ ನಾಟಕವಾಡುತ್ತಿದ್ದಾನೆ ಎಂದು ಆರೋಪಿಸಿ ಗ್ರಾಮಸ್ಥರು ಗಲಾಟೆ ನಡೆಸಿದ್ದಾರೆ.

ಮೃತ ಅಂಜಲಿ ನಿನ್ನೆ ನೇಣು ಬೀಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಆಕೆ ಹೊಟ್ಟೆನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮಹಿಳೆಯ ಅಂತಿಮ ಸಂಸ್ಕಾರ ಮಾಡಲಾಗಿದೆ. ಆದರೆ ಈಗ ಆಕೆಯದ್ದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಗ್ರಾಮಸ್ಥರು ಗಲಾಟೆ ನಡೆಸಿದ್ದಾರೆ.

ಗಂಡನ ಕಡೆಯವರ ವಿರುದ್ಧ ಅಂಜಲಿ ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪ ಮಾಡುತ್ತಿದ್ದಾರೆ. ಪತಿ ಗಂಗಾಧರನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ ಗ್ರಾಮಸ್ಥರು ಆತನ ಮನೆಗೆ ಮುತ್ತಿಗೆ ಹಾಕಿದ್ದಾರೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗಾಧರನನ್ನು ಅರೆಸ್ಟ್​ ಮಾಡುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಗೃಹಿಣಿ ಅನುಮಾನಾಸ್ಪದ ಸಾವಿಗೆ ರೊಚ್ಚಿಗೆದ್ದ ಗ್ರಾಮಸ್ಥರು; ಗಂಡನ ಮನೆಗೆ ಮುತ್ತಿಗೆ ಹಾಕಿ ಬಂಧಿಸಲು ಪಟ್ಟು

https://newsfirstlive.com/wp-content/uploads/2023/07/balari.jpg

    ಬಳ್ಳಾರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ

    ಗೃಹಿಣಿ ಸಾವಿಗೆ ಆಕೆಯ ಗಂಡನೇ ಕಾರಣ ಎಂದ ಗ್ರಾಮಸ್ಥರು

    ಮಹಿಳೆಯ ಅಂತಿಮ ಸಂಸ್ಕಾರ ಬಳಿಕ ಗ್ರಾಮಸ್ಥರಿಂದ ಗಲಾಟೆ

ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ಗೃಹಿಣಿಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಅಂಜಲಿ ಮೃತ ಗೃಹಿಣಿ. ಇದೀಗ ಆಕೆಯ ಸಾವಿನ ಕುರಿತಂತೆ ಗಂಡ ಗಂಗಾಧರ ಹೆಂಡತಿಯನ್ನು ಕೊಲೆ ಮಾಡಿ ನಾಟಕವಾಡುತ್ತಿದ್ದಾನೆ ಎಂದು ಆರೋಪಿಸಿ ಗ್ರಾಮಸ್ಥರು ಗಲಾಟೆ ನಡೆಸಿದ್ದಾರೆ.

ಮೃತ ಅಂಜಲಿ ನಿನ್ನೆ ನೇಣು ಬೀಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಆಕೆ ಹೊಟ್ಟೆನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮಹಿಳೆಯ ಅಂತಿಮ ಸಂಸ್ಕಾರ ಮಾಡಲಾಗಿದೆ. ಆದರೆ ಈಗ ಆಕೆಯದ್ದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಗ್ರಾಮಸ್ಥರು ಗಲಾಟೆ ನಡೆಸಿದ್ದಾರೆ.

ಗಂಡನ ಕಡೆಯವರ ವಿರುದ್ಧ ಅಂಜಲಿ ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪ ಮಾಡುತ್ತಿದ್ದಾರೆ. ಪತಿ ಗಂಗಾಧರನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ ಗ್ರಾಮಸ್ಥರು ಆತನ ಮನೆಗೆ ಮುತ್ತಿಗೆ ಹಾಕಿದ್ದಾರೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗಾಧರನನ್ನು ಅರೆಸ್ಟ್​ ಮಾಡುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More