BREAKING: ಮಹಾಮಳೆಯ ಅನಾಹುತ.. ಬೆಂಗಳೂರಲ್ಲಿ ಗೋಡೆ ಕುಸಿದು ಮಹಿಳೆ ದುರಂತ ಅಂತ್ಯ

author-image
Veena Gangani
Updated On
BREAKING: ಮಹಾಮಳೆಯ ಅನಾಹುತ.. ಬೆಂಗಳೂರಲ್ಲಿ ಗೋಡೆ ಕುಸಿದು ಮಹಿಳೆ ದುರಂತ ಅಂತ್ಯ
Advertisment
  • ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ ಶಹಾಪುರ ಮೂಲದ ಮಹಿಳೆ ಶಶಿಕಲಾ
  • ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ಮಹದೇವಪುರ ಪೊಲೀಸರಿಂದ ಪರಿಶೀಲನೆ
  • ಇಡೀ ರಾತ್ರಿ ಬಂದ ಮಳೆಯಿಂದ ನೆನೆದಿದ್ದರಿಂದ ಗೋಡೆ ದಿಢೀರ್​ ಕುಸಿತ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ತಡರಾತ್ರಿ ಸುರಿದ ಭಾರೀ ಮಳೆ ಸಾಕಷ್ಟು ಅವಾಂತರವನ್ನೇ ಸೃಷ್ಟಿ ಮಾಡಿದೆ. ಇದೀಗ ಮಳೆಯ ಆರ್ಭಟಕ್ಕೆ ಓರ್ವ ಮಹಿಳೆ ಬಲಿಯಾಗಿದ್ದಾರೆ. ಶಶಿಕಲಾ (35) ಮಳೆಗೆ ಬಲಿಯಾದ ಮಹಿಳೆ.

ಇದನ್ನೂ ಓದಿ: ‘ನನ್ನ ಮಗಳು..’ ಬೇಹುಗಾರಿಕೆ ಆರೋಪ ಹೊತ್ತ ಜ್ಯೋತಿ ಮಲ್ಹೋತ್ರ ಬಗ್ಗೆ ತಂದೆ ಏನಂದ್ರು..?

publive-image

ಇಂದು ಬೆಳಗ್ಗೆ ಮಹದೇವಪುರದ ಚನ್ನಸಂದ್ರದಲ್ಲಿ ಐ ಝಡ್ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸಕ್ಕೆ ಹೋದಾಗ ಈ ಘಟನೆ ನಡೆದಿದೆ. ಶಶಿಕಲಾ ಕೆಲಸದ ಮಾಡುತ್ತಿದ್ದ ಸ್ಥಳದಲ್ಲಿ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಪರಿಣಾಮ ಶಶಿಕಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

publive-image

ಇಡೀ ರಾತ್ರಿ ಮಳೆಗೆ ಗೋಡೆ ನೆನೆದಿದ್ದರಿಂದ ಏಕಾಏಕಿ ಶಶಿಕಲಾ ಮೇಲೆ ಗೋಡೆ ಬಿದ್ದಿದೆ. ಮೃತ ಶಶಿಕಲಾ ಅವರಿಗೆ ಇಬ್ಬರು ಸಣ್ಣ ಮಕ್ಕಳಿದ್ದಾರೆ. ಶಶಿಕಲಾ ಗಂಡ ಕೂಡ ಕೂಲಿ ಕೆಲಸ ಮಾಡುತ್ತಿದ್ದಾರೆ. ಇವರು ಶಹಾಪುರ ಮೂಲದವರಾಗಿದ್ದಾರೆ. ಇನ್ನೂ ಈ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮಹದೇವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment