newsfirstkannada.com

VIDEO: ನೇಹಾ ಹಿರೇಮಠ ಮಾದರಿಯಲ್ಲೇ ನಡೀತು ಮತ್ತೊಂದು ಯುವತಿಯ ಬರ್ಬರ ಕೊಲೆ

Share :

Published May 31, 2024 at 12:20pm

    ಹಲವು ದಿನಗಳಿಂದ ಪ್ರೀತಿಸುವಂತೆ ಯುವತಿ ಹಿಂದೆ ಹಿಂದೆ ಬಿದ್ದಿದ್ದ ಆರೋಪಿ

    ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿಯ ಕತ್ತು ಸೀಳಿ ಕೊಲೆ ಮಾಡಿದ ಯುವಕ

    ಕೊಲೆ ಮಾಡಿದ ಆರೋಪಿಯನ್ನ ಗಲ್ಲಿಗೇರಿಸಿ ಅಂತ ನೆಟ್ಟಿಗರಿಂದ ಆಕ್ರೋಶ

ಅಮರಾವತಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಹತ್ಯೆ ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: VIDEO: ಮಹಿಳೆ ಜತೆ ಅಕ್ರಮ ಸಂಬಂಧ; ಬೆಡ್​ ರೂಮ್​ನಲ್ಲಿ ಹೆಂಡತಿಗೆ ರೆಡ್​​ ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ!

ಪ್ರೀತಿಸಲು ನಿರಾಕರಿಸಿದಕ್ಕೆ ಯುವಕನೋರ್ವ ಯುವತಿಯನ್ನು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಏಳೂರು ಜಿಲ್ಲೆಯಲ್ಲಿ ನಡೆದಿದೆ. ಜಕ್ಕು ರತ್ನ ಗ್ರೇಸ್ (22) ಕೊಲೆಯಾದ ಯುವತಿ. ಏಸುರತ್ನಂ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೇರಿ ಪ್ರಶಾಂತಿ, ಆರೋಪಿ ಹಾಗೂ ಮೃತ ಯುವತಿ ಸ್ನೇಹಿತರಾಗಿದ್ದಾರೆ. ಹಲವು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ಆರೋಪಿ ಆಕೆಯ ಹಿಂದೆ ಬಿದ್ದಿದ್ದ. ಆದರೆ ಯುವತಿ ಇದಕ್ಕೆ ಒಪ್ಪಿರಲಿಲ್ಲ. ಇದರಿಂದ ಸಿಟ್ಟಾಗಿದ್ದ ಆರೋಪಿಯು ಆಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ.

ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. ಮೃತ ಯುವತಿಯ ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಸೇಮ್​ ಟು ಸೇಮ್​ ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆಯ ಮಾದರಿಯಲ್ಲೇ ನಡೆದಿದೆ. ಯುವಕ-ಯುವತಿಗೆ ಚಾಕುವಿನಿಂದ ಚುಚ್ಚುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋವನ್ನು ನೋಡಿದ ಅದೆಷ್ಟೋ ಜನರು ಶಾಕ್​ ಆಗಿದ್ದಾರೆ. ಜೊತೆಗೆ ಜಸ್ಟ್​ ಇಸ್ ಫಾರ್ ಜಕ್ಕು ರತ್ನ ಗ್ರೇಸ್ ಅಂತ ಕಾಮೆಂಟ್​ ಮಾಡುತ್ತಿದ್ದಾರೆ. ಇದಲ್ಲದೇ ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ನೆಟ್ಟಿಗರು ಆಕ್ರೋಶ ಹೊರ ಹಾಕುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ನೇಹಾ ಹಿರೇಮಠ ಮಾದರಿಯಲ್ಲೇ ನಡೀತು ಮತ್ತೊಂದು ಯುವತಿಯ ಬರ್ಬರ ಕೊಲೆ

https://newsfirstlive.com/wp-content/uploads/2024/05/death7.jpg

    ಹಲವು ದಿನಗಳಿಂದ ಪ್ರೀತಿಸುವಂತೆ ಯುವತಿ ಹಿಂದೆ ಹಿಂದೆ ಬಿದ್ದಿದ್ದ ಆರೋಪಿ

    ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿಯ ಕತ್ತು ಸೀಳಿ ಕೊಲೆ ಮಾಡಿದ ಯುವಕ

    ಕೊಲೆ ಮಾಡಿದ ಆರೋಪಿಯನ್ನ ಗಲ್ಲಿಗೇರಿಸಿ ಅಂತ ನೆಟ್ಟಿಗರಿಂದ ಆಕ್ರೋಶ

ಅಮರಾವತಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಹತ್ಯೆ ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: VIDEO: ಮಹಿಳೆ ಜತೆ ಅಕ್ರಮ ಸಂಬಂಧ; ಬೆಡ್​ ರೂಮ್​ನಲ್ಲಿ ಹೆಂಡತಿಗೆ ರೆಡ್​​ ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ!

ಪ್ರೀತಿಸಲು ನಿರಾಕರಿಸಿದಕ್ಕೆ ಯುವಕನೋರ್ವ ಯುವತಿಯನ್ನು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಏಳೂರು ಜಿಲ್ಲೆಯಲ್ಲಿ ನಡೆದಿದೆ. ಜಕ್ಕು ರತ್ನ ಗ್ರೇಸ್ (22) ಕೊಲೆಯಾದ ಯುವತಿ. ಏಸುರತ್ನಂ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೇರಿ ಪ್ರಶಾಂತಿ, ಆರೋಪಿ ಹಾಗೂ ಮೃತ ಯುವತಿ ಸ್ನೇಹಿತರಾಗಿದ್ದಾರೆ. ಹಲವು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ಆರೋಪಿ ಆಕೆಯ ಹಿಂದೆ ಬಿದ್ದಿದ್ದ. ಆದರೆ ಯುವತಿ ಇದಕ್ಕೆ ಒಪ್ಪಿರಲಿಲ್ಲ. ಇದರಿಂದ ಸಿಟ್ಟಾಗಿದ್ದ ಆರೋಪಿಯು ಆಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ.

ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. ಮೃತ ಯುವತಿಯ ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಸೇಮ್​ ಟು ಸೇಮ್​ ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆಯ ಮಾದರಿಯಲ್ಲೇ ನಡೆದಿದೆ. ಯುವಕ-ಯುವತಿಗೆ ಚಾಕುವಿನಿಂದ ಚುಚ್ಚುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋವನ್ನು ನೋಡಿದ ಅದೆಷ್ಟೋ ಜನರು ಶಾಕ್​ ಆಗಿದ್ದಾರೆ. ಜೊತೆಗೆ ಜಸ್ಟ್​ ಇಸ್ ಫಾರ್ ಜಕ್ಕು ರತ್ನ ಗ್ರೇಸ್ ಅಂತ ಕಾಮೆಂಟ್​ ಮಾಡುತ್ತಿದ್ದಾರೆ. ಇದಲ್ಲದೇ ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ನೆಟ್ಟಿಗರು ಆಕ್ರೋಶ ಹೊರ ಹಾಕುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More