ಮೋದಿ ಸ್ಟೇಡಿಯಂನಲ್ಲಿ ನಾಳೆ ನಡೆಯಲಿದೆ ಮಹತ್ವದ ಫೈನಲ್
ಟೀಮ್ ಇಂಡಿಯಾ ಕಪ್ ಗೆದ್ದೇ ಗೆಲ್ಲುತ್ತದೆ- ಸಿದ್ದರಾಮಯ್ಯ ವಿಶ್ವಾಸ
ಬ್ಯಾಟಿಂಗ್, ಬೌಲಿಂಗ್ನಲ್ಲೂ ಟೀಮ್ ಇಂಡಿಯಾ ಬಲಿಷ್ಠವಾಗಿದೆ
ಗುಜರಾತ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ವರ್ಲ್ಡ್ಕಪ್ ಫೈನಲ್ ಪಂದ್ಯದ ಮೇಲೆ ಕ್ರಿಕೆಟ್ ಆಭಿಮಾನಿಗಳ ಚಿತ್ತ ನೆಟ್ಟಿದೆ. ಕಪ್ ಗೆಲ್ಲುವ ಫೆವರಿಟ್ ಪಂದ್ಯ ಭಾರತವಾದರೂ ಈಗಾಗಲೇ 5 ಬಾರಿ ವಿಶ್ವಕಪ್ ಗೆದ್ದು ದಾಖಲೆ ಬರೆದಿರುವ ಆಸ್ಟ್ರೇಲಿಯಾ ಮತ್ತೆ ಕಪ್ಗೆ ಮುತ್ತಿಕ್ಕುವ ತವಕದಲ್ಲಿದೆ. ವಿಶ್ವದೆಲ್ಲೆಡೆ ವರ್ಲ್ಡ್ಕಪ್ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು, ಟೀಮ್ ಇಂಡಿಯಾ ಈ ಬಾರಿ ಕಪ್ ಗೆದ್ದೇ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾಳೆ ಭಾರತ- ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಇದರಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಲಿದೆ. ಈ ಬಾರಿ ಭಾರತ ವಿಶ್ವಕಪ್ ಗೆದ್ದೇ ಗೆಲ್ಲುತ್ತದೆ ಎಂದು ವಿಶ್ ಮಾಡಿ ಗುಡ್ ಲಕ್ ತಿಳಿಸಿದ್ದಾರೆ. ಭಾರತ ತಂಡದ ಎಲ್ಲ ಆಟಗಾರರು ಚೆನ್ನಾಗಿ ಬ್ಯಾಟಿಂಗ್, ಬೌಲಿಂಗ್ ಮಾಡುತ್ತಿದ್ದಾರೆ. ಫೀಲ್ಡಿಂಗ್ನಲ್ಲೂ ಒಳ್ಳೆಯ ಚಾಣಕ್ಷತೆ ತೋರುತ್ತಿದ್ದಾರೆ. ನಮ್ಮ ತಂಡ ಈ ಬಾರಿ ಕಪ್ ಗೆಲ್ಲುವ ನಂಬಿಕೆ ಇದೆ. ಒಂದು ತಂಡವಾಗಿ ಆಟವಾಡಿದರೆ ಗೆಲುವು ಸಾಧ್ಯ. ಎಲ್ಲರೂ ಒಗ್ಗೂಡಿ ಉತ್ತಮವಾಗಿ ಆಟವಾಡಲಿ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವರ್ಲ್ಡ್ಕಪ್ ಫೈನಲ್ ಪಂದ್ಯ ನಾಳೆ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಈಗಾಗಲೇ ಪಂದ್ಯ ವೀಕ್ಷಣೆಯ ಟಿಕೆಟ್ಗಳೆಲ್ಲ ಸೋಲ್ಡ್ಔಟ್ ಆಗಿವೆ ಎಂದು ಹೇಳಲಾಗಿದೆ. ಅಹಮದಾಬಾದ್ ನಗರದ ಹೋಟೆಲ್ಗಳೆಲ್ಲ ಭರ್ತಿಯಾಗಿವೆ ಎನ್ನಲಾಗಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಮೋದಿ ಸ್ಟೇಡಿಯಂನಲ್ಲಿ ನಾಳೆ ನಡೆಯಲಿದೆ ಮಹತ್ವದ ಫೈನಲ್
ಟೀಮ್ ಇಂಡಿಯಾ ಕಪ್ ಗೆದ್ದೇ ಗೆಲ್ಲುತ್ತದೆ- ಸಿದ್ದರಾಮಯ್ಯ ವಿಶ್ವಾಸ
ಬ್ಯಾಟಿಂಗ್, ಬೌಲಿಂಗ್ನಲ್ಲೂ ಟೀಮ್ ಇಂಡಿಯಾ ಬಲಿಷ್ಠವಾಗಿದೆ
ಗುಜರಾತ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ವರ್ಲ್ಡ್ಕಪ್ ಫೈನಲ್ ಪಂದ್ಯದ ಮೇಲೆ ಕ್ರಿಕೆಟ್ ಆಭಿಮಾನಿಗಳ ಚಿತ್ತ ನೆಟ್ಟಿದೆ. ಕಪ್ ಗೆಲ್ಲುವ ಫೆವರಿಟ್ ಪಂದ್ಯ ಭಾರತವಾದರೂ ಈಗಾಗಲೇ 5 ಬಾರಿ ವಿಶ್ವಕಪ್ ಗೆದ್ದು ದಾಖಲೆ ಬರೆದಿರುವ ಆಸ್ಟ್ರೇಲಿಯಾ ಮತ್ತೆ ಕಪ್ಗೆ ಮುತ್ತಿಕ್ಕುವ ತವಕದಲ್ಲಿದೆ. ವಿಶ್ವದೆಲ್ಲೆಡೆ ವರ್ಲ್ಡ್ಕಪ್ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು, ಟೀಮ್ ಇಂಡಿಯಾ ಈ ಬಾರಿ ಕಪ್ ಗೆದ್ದೇ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾಳೆ ಭಾರತ- ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಇದರಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಲಿದೆ. ಈ ಬಾರಿ ಭಾರತ ವಿಶ್ವಕಪ್ ಗೆದ್ದೇ ಗೆಲ್ಲುತ್ತದೆ ಎಂದು ವಿಶ್ ಮಾಡಿ ಗುಡ್ ಲಕ್ ತಿಳಿಸಿದ್ದಾರೆ. ಭಾರತ ತಂಡದ ಎಲ್ಲ ಆಟಗಾರರು ಚೆನ್ನಾಗಿ ಬ್ಯಾಟಿಂಗ್, ಬೌಲಿಂಗ್ ಮಾಡುತ್ತಿದ್ದಾರೆ. ಫೀಲ್ಡಿಂಗ್ನಲ್ಲೂ ಒಳ್ಳೆಯ ಚಾಣಕ್ಷತೆ ತೋರುತ್ತಿದ್ದಾರೆ. ನಮ್ಮ ತಂಡ ಈ ಬಾರಿ ಕಪ್ ಗೆಲ್ಲುವ ನಂಬಿಕೆ ಇದೆ. ಒಂದು ತಂಡವಾಗಿ ಆಟವಾಡಿದರೆ ಗೆಲುವು ಸಾಧ್ಯ. ಎಲ್ಲರೂ ಒಗ್ಗೂಡಿ ಉತ್ತಮವಾಗಿ ಆಟವಾಡಲಿ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವರ್ಲ್ಡ್ಕಪ್ ಫೈನಲ್ ಪಂದ್ಯ ನಾಳೆ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಈಗಾಗಲೇ ಪಂದ್ಯ ವೀಕ್ಷಣೆಯ ಟಿಕೆಟ್ಗಳೆಲ್ಲ ಸೋಲ್ಡ್ಔಟ್ ಆಗಿವೆ ಎಂದು ಹೇಳಲಾಗಿದೆ. ಅಹಮದಾಬಾದ್ ನಗರದ ಹೋಟೆಲ್ಗಳೆಲ್ಲ ಭರ್ತಿಯಾಗಿವೆ ಎನ್ನಲಾಗಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ