/newsfirstlive-kannada/media/post_attachments/wp-content/uploads/2025/01/MAHAKUMBH.jpg)
ಮಹಾ ಕುಂಭಮೇಳ.. ಕೋಟ್ಯಂತರ ಭಕ್ತರನ್ನ ಸೆಳೆಯುತ್ತಿರೋ ಜಗತ್ತಿನ ಅತಿ ದೊಡ್ಡ ಧಾರ್ಮಿಕ ಸಂಗಮ.. ಪ್ರಯಾಗ್ರಾಜ್ ಮಿನಿ ಭಾರತದಂತೆ ಕಾಣಿಸ್ತಿದೆ.. ಊಹೆಗೂ ಮೀರಿ ಭಕ್ತ ಸಾಗರವೇ ಹರಿದು ಬಂದಿದೆ.. 144 ವರ್ಷಗಳಿಗೊಮ್ಮೆ ಬರೋ ಮಾಹಾಕುಂಭಮೇಳ ಆ ಭೋಲೇನಾಥನ ಆರಾಧನೆಯಲ್ಲಿ ತೇಲಿಸುತ್ತಿದೆ.
ಇದನ್ನೂ ಓದಿ: ಮಹಾಕುಂಭದಲ್ಲಿ ಸಾಧ್ವಿ ಹರ್ಷ ರಿಚರಿಯಾ ವಿವಾದ; ಭುಗಿಲೆದ್ದ ಆಕ್ರೋಶ..
ರಾತ್ರಿ ವೇಳೆ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡ ಪ್ರಯಾಗರಾಜ್ನ ಅದ್ಭುತ ಫೋಟೋಗಳನ್ನು ಮಹಾಕುಂಭ ಹಂಚಿಕೊಂಡಿದೆ. ಮಹಾಕುಂಭ ನಡೆಯುತ್ತಿರುವ ವಿಹಂಗಮ ನೋಟದ ಫೋಟೋಗಳು ಅದಾಗಿವೆ.
ಜನವರಿ 13 ರಂದು ಪುಷ್ಯ ಪೂರ್ಣಿಮಾ ಸ್ನಾನ.. ಜನವರಿ 15 ರಂದು ಮಕರ ಸಂಕ್ರಾಂತಿ ಪುಣ್ಯಸ್ನಾನ.. ಇವೆರೆಡು ಮುಗಿದಿದೆ.. ಸದ್ಯಕ್ಕೆ ಮುಂದಿರೋದು ಜನವರಿ 29 ರಂದು ನಡೆಯೋ ಮೌನಿ ಅಮಾವಾಸ್ಯೆ ಪುಣ್ಯಸ್ನಾನ.. ಜನವರಿ 13 ರಂದು 1.75 ಕೋಟಿಯಷ್ಟು ಭಕ್ತರು ಸ್ನಾನ ಮಾಡಿದ್ರು.. ಜನವರಿ 15 ರಂದು 3.5 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ರು.. ಜನವರಿ 29 ರಂದು ಸುಮಾರು 8 ರಿಂದ 10 ಕೋಟಿ ಭಕ್ತವೃಂದ ಸೇರೋ ನಿರೀಕ್ಷೆ ಇದೆ.
ಇದನ್ನೂ ಓದಿ:ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ವೈಭವ; ಮೌನಿ ಅಮಾವಾಸ್ಯೆ ಶಾಹಿಸ್ನಾನಕ್ಕೆ 10 ಕೋಟಿ ಭಕ್ತರ ನಿರೀಕ್ಷೆ..
ಈಗಾಗಲೇ ಮಹಾ ಕುಂಭವೇಳಕ್ಕೆ ಸಾಧು ಸಂತರು ಸೇರಿದಂತೆ ಕೋಟ್ಯಾಂತರ ಭಕ್ತರು ಆಗಮಿಸುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ ಪುನೀತರಾಗುತ್ತಿದ್ದಾರೆ. ಹರಹರ ಮಹಾದೇವ್, ಜೈಶ್ರೀರಾಮ್ ಮತ್ತು ಜೈ ಗಂಗಾ ಮಾತೆ ಎಂಬ ಘೋಷಣೆ ಮೂಲಕ ಕೋಟ್ಯಾಂತರ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ ತ್ರಿವೇಣಿ ಸಂಗಮದ ಬಳಿ 60 ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ ಅಂತ ಯುಪಿ ಗೃಹ ಇಲಾಖೆ ಕಾರ್ಯದರ್ಶಿ ಸಂಜಯ್ ಪ್ರಸಾದ್ ತಿಳಿಸಿದ್ದಾರೆ.
ಇದನ್ನೂ ಓದಿ:ಮಹಾಕುಂಭದಲ್ಲಿ ಪಾರಿವಾಳ ಬಾಬಾ.. ಇವರ ತಲೆ ಬಿಟ್ಟು ಎಲ್ಲಿಯೂ ಹೋಗಲ್ಲ ಈ ಹಕ್ಕಿ..!
ಧಾರ್ಮಿಕ ಸಂಗಮ ಭಕ್ತರನ್ನ ಸೆಳೆಯೋದು ಮಾತ್ರವಲ್ಲ ಉತ್ತರ ಪ್ರದೇಶದ ಆರ್ಥಿಕತೆ ನೆಕ್ಸ್ಟ್ ಲೆವೆಲ್ಗೆ ಕೊಂಡೊಯ್ಯುತ್ತಿದೆ. ಮಹಾಕುಂಭಮೇಳ ಉತ್ತರ ಪ್ರದೇಶದ ಆರ್ಥಿಕತೆಗೆ ಬಲ ತುಂಬಲಿದೆ ಅಂತ ಅಂದಾಜಿಸಲಾಗಿದೆ.
ಯುಪಿ ಸರ್ಕಾರ ಬರೋಬ್ಬರಿ 25 ಸಾವಿರ ಕೋಟಿ ರೂಪಾಯಿಗಳನ್ನ ಖರ್ಚು ಮಾಡ್ತಿದೆ. ಆದ್ರೆ ಬರೋಬ್ಬರಿ 2 ಲಕ್ಷ ಕೋಟಿ ರೂಪಾಯಿ ಆದಾಯದ ನಿರೀಕ್ಷೆಯನ್ನೂ ಹೊಂದಿದೆ. ಜೊತೆಗೆ ಕೇಂದ್ರಕ್ಕೂ ಆರ್ಥಿಕ ಲಾಭ ನೀಡ್ತಿದೆ. ಭಕ್ತಾದಿಗಳ ಓಡಾಟಕ್ಕೆ ಸುಮಾರು 13 ಸಾವಿರ ವಿಶೇಷ ರೈಲಿನ ಟ್ರಿಪ್ ನೀಡಿದೆ.
ಇದನ್ನೂ ಓದಿ: ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ವೈಭವ; ಮೌನಿ ಅಮಾವಾಸ್ಯೆ ಶಾಹಿಸ್ನಾನಕ್ಕೆ 10 ಕೋಟಿ ಭಕ್ತರ ನಿರೀಕ್ಷೆ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ