ಟಿಸಿ ಪಡೆಯಲು ಬೆಂಗಳೂರಿಗೆ ಬಂದಿದ್ದ ವಿದ್ಯಾರ್ಥಿ.. RCB ವಿಜಯೋತ್ಸವದಲ್ಲಿ ದುರಂತ ಅಂತ್ಯ

author-image
Veena Gangani
Updated On
ಟಿಸಿ ಪಡೆಯಲು ಬೆಂಗಳೂರಿಗೆ ಬಂದಿದ್ದ ವಿದ್ಯಾರ್ಥಿ.. RCB ವಿಜಯೋತ್ಸವದಲ್ಲಿ  ದುರಂತ ಅಂತ್ಯ
Advertisment
  • ದ್ವಿತೀಯ ಪಿಯುಸಿಗೆ ಸೇರಲು ಟಿಸಿ ಪಡೆಯಲು ಬಂದಿದ್ದ
  • ಆರ್​ಸಿಬಿ ಆಟಗಾರರ ನೋಡಲು ಬಂದಿದ್ದ ಶಿವಲಿಂಗ್
  • ಯಾದಗಿರಿಯ ರಾಮಸಂದ್ರ ಗ್ರಾಮಕ್ಕೆ ಮೃತದೇಹ ರವಾನೆ

ಬೆಂಗಳೂರು: ಐಪಿಎಲ್​ ಫೈನಲ್​ನಲ್ಲಿ ಆರ್​ಸಿಬಿ ತಂಡವು ಪಂಜಾಬ್ ಕಿಂಗ್ಸ್​ ಅನ್ನು ಸೋಲಿಸಿ ಟ್ರೋಫಿಗೆ ಮುತ್ತಿಟ್ಟಿತು. ಇದೇ ಖುಷಿಯಲ್ಲಿ ರಾಜ್ಯ ಸರ್ಕಾರ ವಿಧಾನಸೌಧದ ಮುಂಭಾಗದಲ್ಲಿ ಆರ್​ಸಿಬಿ ಟೀಂಗೆ ಹಾಗೂ ಟೀಂನ ಮ್ಯಾನೇಜ್ಮೆಂಟ್​ಗೆ ಸನ್ಮಾನ ಕಾರ್ಯಕ್ರಮ ಇಟ್ಟುಕೊಂಡಿತ್ತು.

ಇದನ್ನೂ ಓದಿ:ಮದುವೆಗೆ ಹುಡುಗಿನ ನೋಡಿದ್ವಿ.. RCB ಅಂತ ಬೆಂಗಳೂರಿಗೆ ಹೋಗಿದ್ದು ಗೊತ್ತಿಲ್ಲ- ಮಗನಿಗಾಗಿ ತಾಯಿಯ ಆಕ್ರಂದನ

publive-image

ಇತ್ತ ಚಿನ್ನಸ್ವಾಮಿ ಮೈದಾನದಲ್ಲಿ ಆರ್​ಸಿಬಿ, ಫ್ಯಾನ್ಸ್​ ಮೀಟ್ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿಗೆ ಅಪಾರ ಅಭಿಮಾನಿಗಳು ಹರಿದು ಬಂದಿದ್ದಾರೆ. ಆಗ ನೂಕು ನುಗ್ಗಲು ಸಂಭವಿಸಿ ಕಾಲ್ತುಳಿತ ನಡೆದು ಅನಾಹುತ ಆಗಿದೆ.

publive-image

ಈ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಬೌರಿಂಗ್​ ಮತ್ತು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನೂ ಇದೇ ಘಟನೆಯಲ್ಲಿ ಆರ್​ಸಿಬಿ ಆಟಗಾರರನ್ನು ನೋಡಲು ಬಂದಿದ್ದ ಅಭಿಮಾನಿ ಶಿವಲಿಂಗ್ ಮೃತಪಟ್ಟಿದ್ದಾನೆ.

publive-image

ಯಾದಗಿರಿ ಜಿಲ್ಲೆಯ ರಾಮಸಂದ್ರ ಮೂಲದ ಶಿವಲಿಂಗ್ ದ್ವಿತೀಯ ಪಿಯುಸಿಗೆ ಸೇರಲು ಟಿಸಿ ಪಡೆಯಲು ಬೆಂಗಳೂರಿಗೆ ಬಂದಿದ್ದ. ಆದ್ರೆ ಟಿಸಿ ಪಡೆಯದೇ ನೇರವಾಗಿ ಸ್ಟೇಡಿಯಂಗೆ ಹೋಗಿದ್ದಾನೆ. ಇದೇ ವೇಳೆ ಕಾಲ್ತುಳಿತದಲ್ಲಿ ವಿದ್ಯಾರ್ಥಿ ಶಿವಲಿಂಗ್​ ಮೃತಪಟ್ಟಿದ್ದಾನೆ. ನೋವಿನ ವಿಚಾರ ಏನೆಂದರೆ ಪೋಷಕರು ಕೂಲಿ ಕೆಲಸ ಮಾಡಿ ಈತನನ್ನು ಓದಿಸುತ್ತಿದ್ದರು. ಆದ್ರೆ ಹೀಗೆ ಆರ್​ಸಿಬಿ ಆಟಗಾರರನ್ನು ನೋಡಲು ಬಂದಿದ್ದ ದಾರುಣವಾಗಿ ಜೀವಬಿಟ್ಟಿದ್ದಾನೆ. ಈಗಾಗಲೇ ವಿದ್ಯಾರ್ಥಿಯ ಮೃತದೇಹವನ್ನು ಯಾದಗಿರಿಯ ರಾಮಸಂದ್ರ ಗ್ರಾಮಕ್ಕೆ ರವಾನೆ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment