newsfirstkannada.com

ಮೀನು ಹಿಡಿಯಲು ಹೋದಾಗ ಭೀಕರ ಅಪಘಾತ.. ಓರ್ವ ಯುವಕ ಸ್ಥಳದಲ್ಲೇ ಸಾವು

Share :

Published June 27, 2024 at 7:49am

    ದುರ್ಘಟನೆಯಲ್ಲಿ ಒಂದು ಸಾವು, ನಾಲ್ವರಿಗೆ ಗಾಯ

    ಇಬ್ಬರು ಯುವಕರು ಮಣಿಪಾಲ್ ಆಸ್ಪತ್ರೆಗೆ ದಾಖಲು

    ಮಳೆಯಿಂದಾಗಿ ಪಲ್ಟಿ ಹೊಡೆದ ಯುವಕರ ಕಾರು

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಯಡೂರು ಸಮೀಪ ನಡೆದಿದೆ. ಅತಿಶಯ (24) ಎಂಬ ಯುವಕ ಸಾವನ್ನಪ್ಪಿದ್ದಾನೆ.

ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಸ್ ಬರುವಾಗ ದುರ್ಘಟನೆ ನಡೆದಿದೆ. ಇನ್ನೊಬ್ಬ ಯುವಕನ ಸ್ಥಿತಿ ಗಂಭೀರವಾಗಿದ್ದು, ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ:ಕರ್ನಾಟಕದ 2 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ.. ಭಾರೀ ಮಳೆ.. ರೆಡ್​ ಅಲರ್ಟ್​ ಘೋಷಣೆ

ತೀರ್ಥಹಳ್ಳಿಯ ಬುಕ್ಲಾಪುರ ಹಾಗೂ ಹೊರಬೈಲಿನ ಐವರು ಯುವಕರು ಮೀನು ಹಿಡಿಯಲು ಕಾರಿನಲ್ಲಿ ಹೋಗಿದ್ದರು. ಮೀನು ಹಿಡಿದು ಹಿಂದಿರುಗುವಾಗ ಕಾರು ಪಲ್ಟಿಯಾಗಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ವಿಶ್ವಕಪ್ ಸೆಮಿಫೈನಲ್ ಆಡ್ತಿರುವ ಭಾರತದ ಪ್ಲೇಯಿಂಗ್-11 ಹೇಗಿರುತ್ತದೆ..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮೀನು ಹಿಡಿಯಲು ಹೋದಾಗ ಭೀಕರ ಅಪಘಾತ.. ಓರ್ವ ಯುವಕ ಸ್ಥಳದಲ್ಲೇ ಸಾವು

https://newsfirstlive.com/wp-content/uploads/2024/06/SMG-ACCIDENT-1.jpg

    ದುರ್ಘಟನೆಯಲ್ಲಿ ಒಂದು ಸಾವು, ನಾಲ್ವರಿಗೆ ಗಾಯ

    ಇಬ್ಬರು ಯುವಕರು ಮಣಿಪಾಲ್ ಆಸ್ಪತ್ರೆಗೆ ದಾಖಲು

    ಮಳೆಯಿಂದಾಗಿ ಪಲ್ಟಿ ಹೊಡೆದ ಯುವಕರ ಕಾರು

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಯಡೂರು ಸಮೀಪ ನಡೆದಿದೆ. ಅತಿಶಯ (24) ಎಂಬ ಯುವಕ ಸಾವನ್ನಪ್ಪಿದ್ದಾನೆ.

ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಸ್ ಬರುವಾಗ ದುರ್ಘಟನೆ ನಡೆದಿದೆ. ಇನ್ನೊಬ್ಬ ಯುವಕನ ಸ್ಥಿತಿ ಗಂಭೀರವಾಗಿದ್ದು, ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ:ಕರ್ನಾಟಕದ 2 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ.. ಭಾರೀ ಮಳೆ.. ರೆಡ್​ ಅಲರ್ಟ್​ ಘೋಷಣೆ

ತೀರ್ಥಹಳ್ಳಿಯ ಬುಕ್ಲಾಪುರ ಹಾಗೂ ಹೊರಬೈಲಿನ ಐವರು ಯುವಕರು ಮೀನು ಹಿಡಿಯಲು ಕಾರಿನಲ್ಲಿ ಹೋಗಿದ್ದರು. ಮೀನು ಹಿಡಿದು ಹಿಂದಿರುಗುವಾಗ ಕಾರು ಪಲ್ಟಿಯಾಗಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ವಿಶ್ವಕಪ್ ಸೆಮಿಫೈನಲ್ ಆಡ್ತಿರುವ ಭಾರತದ ಪ್ಲೇಯಿಂಗ್-11 ಹೇಗಿರುತ್ತದೆ..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More