/newsfirstlive-kannada/media/post_attachments/wp-content/uploads/2024/11/Bengaluru-3.jpg)
ಬೆಂಗಳೂರು: ದೀಪಾವಳಿ ದಿನದಂದು ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕ ಬಲಿಯಾದ ಘಟನೆ ಬೆಳಕಿಗೆ ಬಂದಿದೆ. ಕೋಣನಕುಂಟೆಯ ವೀವರ್ಸ್ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ.
ಪಟಾಕಿ ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತು. ಆದರೆ ಸ್ನೇಹಿತರು ಹುಡುಗಾಟ ಮಾಡಲು ಹೋಗಿ ಸ್ನೇಹಿತನನ್ನೇ ಕಳೆದುಕೊಂಡಿದ್ದಾರೆ. ಶಬರೀಶ್ ಎಂಬ ಯುವಕ ಸ್ನೇಹಿತರೊಂದಿಗೆ ಹುಚ್ಚಾಟ ಮಾಡಲು ಹೋಗಿ ಬಲಿಯಾಗಿದ್ದಾನೆ.
ಇದನ್ನೂ ಓದಿ: ಕಂದಕಕ್ಕೆ ಉರುಳಿ ಬಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್.. 15 ಜನರು ಸಾ*ವನ್ನಪ್ಪಿರುವ ಶಂಕೆ
ದೀಪಾವಳಿ ದಿನದಂದು ಶಬರೀಶ್ ಹಾಗೂ ಸ್ನೇಹಿತರು ಪಟಾಕಿ ಹೊಡೆಯುತ್ತಿದ್ದರು. ಈ ವೇಳೆ ಪಟಾಕಿ ಇಟ್ಟು ಅದರ ಮೇಲೆ ಡಬ್ಬ ಇಟ್ಟು ಕೂರಲು ಚಾಲೆಂಜ್ ಹಾಕಿದ್ದರು. ಮದ್ಯಪಾನ ಮಾಡಿದ್ದ ಶಬರೀಶ್ ಅದೇ ರೀತಿ ಮಾಡಿದ್ದಾನೆ. ಪಟಾಕಿ ಸಿಡಿದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದಾನೆ.
ದೀಪಾವಳಿ ದಿನದಂದು ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕ ಬಲಿಯಾದ ಘಟನೆ ಬೆಳಕಿಗೆ ಬಂದಿದೆ. ಕೋಣನಕುಂಟೆಯ ವೀವರ್ಸ್ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ.#Deepavali2024#Firecrackers#bengalurupic.twitter.com/pm1AuDCJlP
— Harshith Achrappady (@HAchrappady)
ದೀಪಾವಳಿ ದಿನದಂದು ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕ ಬಲಿಯಾದ ಘಟನೆ ಬೆಳಕಿಗೆ ಬಂದಿದೆ. ಕೋಣನಕುಂಟೆಯ ವೀವರ್ಸ್ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ.#Deepavali2024#Firecrackers#bengalurupic.twitter.com/pm1AuDCJlP
— Harshith Achrappady (@HAchrappady) November 4, 2024
">November 4, 2024
ಇದನ್ನೂ ಓದಿ: ಬಾಲಕನ ಹೊಟ್ಟೆಯಲ್ಲಿತ್ತು ಬ್ಯಾಟರಿ, ಬ್ಲೇಡ್, ಮೊಳೆ, ಉಗುರು ಸೇರಿ 56 ವಸ್ತುಗಳು.. ಆಪರೇಷನ್ ಬಳಿಕ ಸಾ*ವು
ಗಾಯಾಳು ಶಬರೀಶನನ್ನು ಆಸ್ಪತ್ರೆಗೆ ದಾಖಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶಬರೀಶ್ ಸಾವನ್ನಪ್ಪಿದ್ದಾನೆ. ಸದ್ಯ ಈ ಘಟನೆ ಸಂಬಂಧ ಕೋಣನಕುಂಟೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ