ಯದುವೀರ್ 2ನೇ ಪುತ್ರನ ನಾಮಕಾರಣ; ಯುಗಾಧ್ಯಕ್ಷ ಕೃಷ್ಣದತ್ತ ಚಾಮರಾಜ ಒಡೆಯರ್‌ ಫೋಟೋ ಇಲ್ಲಿವೆ!

author-image
admin
Updated On
ಯದುವೀರ್ 2ನೇ ಪುತ್ರನ ನಾಮಕಾರಣ; ಯುಗಾಧ್ಯಕ್ಷ ಕೃಷ್ಣದತ್ತ ಚಾಮರಾಜ ಒಡೆಯರ್‌ ಫೋಟೋ ಇಲ್ಲಿವೆ!
Advertisment
  • ಮೈಸೂರು ಅರಮನೆಯ ಅಂಗಳದಲ್ಲಿ ನಡೆದ ನಾಮಕರಣ ಶಾಸ್ತ್ರ
  • ಚಿರಂಜೀವಿ ಶ್ರೀ ಯುಗಾಧ್ಯಕ್ಷ ಕೃಷ್ಣರಾಜ ಒಡೆಯರ್ ಎಂದು ನಾಮಕರಣ
  • ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಅನುಗ್ರಹ

ಮಹಾರಾಜ ಯದುವೀರ್ ದ್ವಿತೀಯ ಪುತ್ರನ ನಾಮಕರಣ ಮೈಸೂರು ಅರಮನೆಯ ಅಂಗಳದಲ್ಲಿ ಶಾಸ್ತ್ರೋಕ್ತವಾಗಿ ನೆರವೇರಿದೆ.

publive-image

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎರಡನೇ ಪುತ್ರನಿಗೆ ಚಿರಂಜೀವಿ ಶ್ರೀ ಯುಗಾಧ್ಯಕ್ಷ ಕೃಷ್ಣರಾಜ ಒಡೆಯರ್ ಎಂದು ನಾಮಕರಣ ಮಾಡಲಾಗಿದೆ.

publive-image

ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಅನುಗ್ರಹದಿಂದ ನಮ್ಮ ಎರಡನೇ ಮಗನಿಗೆ ಅರಮನೆಯ ಸಂಪ್ರದಾಯದಂತೆ ನಾಮಕರಣ ನೆರವೇರಿದೆ.

publive-image

ನಮ್ಮ ತಾಯಿಯವರಾದ ಶ್ರೀಮತಿ ಡಾ. ಪ್ರಮೋದಾ ದೇವಿ ಒಡೆಯರ್‌ ಅವರ ಆಧ್ವರ್ಯದಲ್ಲಿ ಚಿರಂಜೀವಿ ಶ್ರೀ ಯುಗಾಧ್ಯಕ್ಷ ಕೃಷ್ಣರಾಜ ಒಡೆಯರ್ ಎಂದು ನಾಮಕರಣ ಮಾಡಲಾಗಿದೆ ಎಂದು ಯದುವೀರ್ ಒಡೆಯರ್ ಅವರು ಸಂತಸವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ದರ್ಶನ್​ ವಿರುದ್ಧ ಮತ್ತೆ ಪೊಲೀಸರ ಸಂಚು’- ಡಿಗ್ಯಾಂಗ್‌ ಕೋರ್ಟ್‌ಗೆ ಹಾಜರಾದ ಬಳಿಕ ವಕೀಲರ ಆರೋಪ 

publive-image

ನಾಮಕರಣ ಶಾಸ್ತ್ರದ ಫೋಟೋಗಳನ್ನು ಹಂಚಿಕೊಂಡಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪ್ರತಿಯೊಬ್ಬ ಹಿತೈಷಿಗಳಿಗೂ ನಮ್ಮ ಹೃತ್ಪೂರ್ವಕವಾದ ವಂದನೆಗಳನ್ನು ತಿಳಿಸುತ್ತೇವೆ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment