/newsfirstlive-kannada/media/post_attachments/wp-content/uploads/2025/04/yuva.jpg)
ಸ್ಯಾಂಡಲ್​ವುಡ್​ ನಟ ಯುವ ರಾಜ್​ಕುಮಾರ್​ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಹೀಗಾಗಿ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಯುವ ರಾಜ್ಕುಮಾರ್ ಅವರ ನಿವಾಸದ ಮುಂದೆ ಜಮಾಯಿಸಿದ್ದರು. ಆದರೆ ನಿನ್ನೆ ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆದಿದ್ದಕ್ಕೆ ನಟ ಯುವ ರಾಜ್​ಕುಮಾರ್​ ಕೇಕ್ ಕತ್ತರಿಸಲಿಲ್ಲ.
/newsfirstlive-kannada/media/post_attachments/wp-content/uploads/2025/04/yuva1.jpg)
ಇದನ್ನೂ ಓದಿ:ಉಗ್ರರ ಗುಂಡಿನ ದಾಳಿ.. ಪ್ರಾಣ ಬಿಟ್ಟ ಮಗನ ಬರುವಿಕೆಗಾಗಿ ಕಾದು ಕುಳಿತ ತಾಯಿ
As a mark of respect to the families who suffered losses in the pahalgam terrorist attack, Ekka Teaser will be released at 5PM.
Our Prayers are with them.@PRK_Productions@JayannaFilms@KRG_Studios@yuva_rajkumar@RohitPadaki@aanandaaudio@charanrajmr2701— Karthik Gowda (@Karthik1423) April 23, 2025
ಹುಟ್ಟುಹಬ್ಬಕ್ಕೆ ವಿಶೇಷವಾಗಿ ಎಕ್ಕ ಸಿನಿಮಾ ಟೀಸರ್ ಬಿಡುಗಡೆ ಆಗಬೇಕಿತ್ತು. ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಚಿತ್ರತಂಡ ಟೀಸರ್ ಬಿಡುಗಡೆಯನ್ನು ಮುಂದೂಡಿಕೆ ಮಾಡಿದೆ. ಬೆಳಗ್ಗೆ ಬಿಡುಗಡೆ ಆಗಬೇಕಿದ್ದ ಟೀಸರ್ ಇಂದು ಸಂಜೆ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಕಾರ್ತಿಕ್ ಗೌಡ ಅವರು ಟ್ವೀಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಮಾತಾಡಿದ ನಟ ಯುವ ರಾಜ್ಕುಮಾರ್, ಉಗ್ರರಿಗೆ ತಕ್ಕ ಶಿಕ್ಷೆ ಆಗ್ಬೇಕು. ಕಾಶ್ಮೀರದ ಪಹಲ್ಗಾಂನಲ್ಲಿ ನಡೆದಿರೋ ದಾಳಿ ಖಂಡನೀಯ. ಈ ರೀತಿ ಮುಗ್ಧ ಜನರ ಕೊಲ್ಲೋದು ಸರಿಯಲ್ಲ. ದಾಳಿ ನಡೆಸಿದ ಉಗ್ರರಿಗೆ ತಕ್ಕ ಶಿಕ್ಷೆ ಆಗ್ಬೇಕು. ಮತ್ತೆ ಮತ್ತೆ ಈ ರೀತಿಯ ದಾಳಿ ಆಗ್ತಿದ್ದು, ಸರ್ಕಾರ ಸರಿಯಾದ ಕ್ರಮ ಕೈಗೊಳ್ಳಬೇಕು. ಕಾಶ್ಮೀರದಲ್ಲಿ ಯುವ ಸಾಂಗ್ ಶೂಟ್ ಆಗಿತ್ತು. ಯುವ ಸಿನಿಮಾದ ಒಂದು ಹಾಡನ್ನು ನಾವು ಲಡಾಕ್​ನಲ್ಲಿ ಚಿತ್ರೀಕರಣ ನಡೆಸಿದ್ವಿ. ಅಲ್ಲಿ ದಾಳಿಯ ಯಾವುದೇ ಅನುಭವ ಆಗಿರಲಿಲ್ಲ. ಅಲ್ಲಿ ಸೇನೆಯ ರಕ್ಷಣೆಯಿತ್ತು. ಯಾವುದೇ ಅಹಿತಕರ ಘಟನೆಗಳು ಆಗಿರಲಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us