BREAKING: ಸಚಿವ ಜಮೀರ್​​ ಅಹ್ಮದ್​ ಖಾನ್​​ ದಿಢೀರ್​ ಆಸ್ಪತ್ರೆಗೆ ದಾಖಲು; ಅಂಥದ್ದೇನಾಯ್ತು?

author-image
Ganesh Nachikethu
Updated On
VIDEO: JDS ಕಾರ್ಯಕರ್ತರ ಕ್ಷಮೆ ಕೋರಿದ ಸಚಿವ ಜಮೀರ್; ದಿಢೀರ್‌ U ಟರ್ನ್‌ ಯಾಕೆ?
Advertisment
  • ಕರ್ನಾಟಕದಲ್ಲಿ ರಂಗೇರಿದ ಲೋಕಸಭಾ ಚುನಾವಣಾ ಅಖಾಡ!
  • ಚಿತ್ರದುರ್ಗದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದಿದ್ದ ಜಮೀರ್​
  • ಪ್ರಚಾರ ಬಂದಾಗ ಜಮೀರ್​ಗೆ ದಿಢೀರ್​ ಕಾಣಿಸಿಕೊಂಡ ಎದೆನೋವು

ಚಿತ್ರದುರ್ಗ: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ತುಮಕೂರಲ್ಲಿ ಪ್ರಚಾರ ಮುಗಿಸಿ ಸಚಿವ ಜಮೀರ್​ ಅಹ್ಮದ್​ ಖಾನ್​​​ ಇಂದು ಕಾಂಗ್ರೆಸ್​ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಚಿತ್ರದುರ್ಗಕ್ಕೆ ಬಂದಿದ್ದರು. ಇಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್​ ಪರ ಪ್ರಚಾರ ಮಾಡಲು ಬರುವಾಗ ದಿಢೀರ್​ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಜಮೀರ್​ ಅಹ್ಮದ್​ ಖಾನ್​ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು, ಚಿತ್ರದುರ್ಗದ ಬಸವೇಶ್ವರ್​​ ಆಸ್ಪತ್ರೆಗೆ ಜಮೀರ್​​ ಅವರನ್ನು ದಾಖಲು ಮಾಡಲಾಗಿದೆ. ಮೊದಲಿಗೆ ಜಮೀರ್​ ಅವರಿಗೆ ಬೆನ್ನುನೋವು ಕಾಣಿಸಿಕೊಂಡಿದ್ದು, ನಂತರ ಎದೆನೋವು ಬಂದಿದೆ. ಹೀಗಾಗಿ ಜಮೀರ್​ ಅವರಿಗೆ ಇಸಿಜಿ ಮತ್ತು ಎಕೋ ಪರೀಕ್ಷೆ ನಡೆಸುತ್ತಿದ್ದಾರೆ ಎಂದು ಹೃದ್ರೋಗ ತಜ್ಞ ಡಾ. ಕಾರ್ತಿಕ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೈಕ್​, ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment