ಕರ್ನಾಟಕದಲ್ಲಿ ರಂಗೇರಿದ ಲೋಕಸಭಾ ಚುನಾವಣಾ ಅಖಾಡ!
ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದಿದ್ದ ಜಮೀರ್
ಪ್ರಚಾರ ಬಂದಾಗ ಜಮೀರ್ಗೆ ದಿಢೀರ್ ಕಾಣಿಸಿಕೊಂಡ ಎದೆನೋವು
ಚಿತ್ರದುರ್ಗ: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ತುಮಕೂರಲ್ಲಿ ಪ್ರಚಾರ ಮುಗಿಸಿ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಚಿತ್ರದುರ್ಗಕ್ಕೆ ಬಂದಿದ್ದರು. ಇಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲು ಬರುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಜಮೀರ್ ಅಹ್ಮದ್ ಖಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು, ಚಿತ್ರದುರ್ಗದ ಬಸವೇಶ್ವರ್ ಆಸ್ಪತ್ರೆಗೆ ಜಮೀರ್ ಅವರನ್ನು ದಾಖಲು ಮಾಡಲಾಗಿದೆ. ಮೊದಲಿಗೆ ಜಮೀರ್ ಅವರಿಗೆ ಬೆನ್ನುನೋವು ಕಾಣಿಸಿಕೊಂಡಿದ್ದು, ನಂತರ ಎದೆನೋವು ಬಂದಿದೆ. ಹೀಗಾಗಿ ಜಮೀರ್ ಅವರಿಗೆ ಇಸಿಜಿ ಮತ್ತು ಎಕೋ ಪರೀಕ್ಷೆ ನಡೆಸುತ್ತಿದ್ದಾರೆ ಎಂದು ಹೃದ್ರೋಗ ತಜ್ಞ ಡಾ. ಕಾರ್ತಿಕ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬೈಕ್, ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕರ್ನಾಟಕದಲ್ಲಿ ರಂಗೇರಿದ ಲೋಕಸಭಾ ಚುನಾವಣಾ ಅಖಾಡ!
ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದಿದ್ದ ಜಮೀರ್
ಪ್ರಚಾರ ಬಂದಾಗ ಜಮೀರ್ಗೆ ದಿಢೀರ್ ಕಾಣಿಸಿಕೊಂಡ ಎದೆನೋವು
ಚಿತ್ರದುರ್ಗ: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ತುಮಕೂರಲ್ಲಿ ಪ್ರಚಾರ ಮುಗಿಸಿ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಚಿತ್ರದುರ್ಗಕ್ಕೆ ಬಂದಿದ್ದರು. ಇಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲು ಬರುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಜಮೀರ್ ಅಹ್ಮದ್ ಖಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು, ಚಿತ್ರದುರ್ಗದ ಬಸವೇಶ್ವರ್ ಆಸ್ಪತ್ರೆಗೆ ಜಮೀರ್ ಅವರನ್ನು ದಾಖಲು ಮಾಡಲಾಗಿದೆ. ಮೊದಲಿಗೆ ಜಮೀರ್ ಅವರಿಗೆ ಬೆನ್ನುನೋವು ಕಾಣಿಸಿಕೊಂಡಿದ್ದು, ನಂತರ ಎದೆನೋವು ಬಂದಿದೆ. ಹೀಗಾಗಿ ಜಮೀರ್ ಅವರಿಗೆ ಇಸಿಜಿ ಮತ್ತು ಎಕೋ ಪರೀಕ್ಷೆ ನಡೆಸುತ್ತಿದ್ದಾರೆ ಎಂದು ಹೃದ್ರೋಗ ತಜ್ಞ ಡಾ. ಕಾರ್ತಿಕ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬೈಕ್, ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ